ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ
Award to Swami Vivekananda College of Chaitanya Group
ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ
ಕೊಪ್ಪಳ: ಇಲ್ಲಿನ ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳು ಹಲವು ಕ್ರೀಡೆಗಳಲ್ಲಿ ಸಾಧನೆ ಮಾಡಿದ್ದು ದಸರಾ ವಿಭಾಗಮಟ್ಡದ ನೆಟ್ ಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳ ನಾಯಕತ್ವದಲ್ಲಿ ತಂಡ ದಸರಾ ವಿಭಾಗಮಟ್ಟದಲ್ಲಿ ಗೆಲುವು ಸಾಧಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅದೇ ರೀತಿ ದಸರಾ ತಾಲೂಕ ಮತ್ತು ಜಿಲ್ಲಾಮಟ್ಟದಲ್ಲಿ ಸಹ ಪ್ರಥಮ ಸ್ಥಾನ ಪಡೆದಿದ್ದಾರೆ. ಇನ್ನು ಇದೇ ತಂಡ ಪದವಿಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಸಹ ತಾಲೂಕ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಡದ ಆಯ್ಕೆಯಲ್ಲಿ ಐದು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಅಲ್ಲದೇ ಆರು ಜನ ವಿದ್ಯಾರ್ಥಿನಿಯರು ಏರ್ ರೈಫಲ್ ಶೂಟಿಂಗ್ ಓಪನ್ ಮತ್ತು ಪೀಪ್ ಕ್ರಮವಾಗಿ ಮೊದಲ ಮೂರು ಸ್ಥಾನ ಹಾಗೂ ಸಾಹಿತ್ಯ ಎಂ. ಗೊಂಡಬಾಳ ಅವರು ಜಂಪ್ ರೋಪ್ (ಟೀಮ್) ಹಾಗೂ ಕರಾಟೆ 64+ ಕೆ.ಜಿ. ವಿಭಾದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ತಂಡದಲ್ಲಿ ಕಾಲೇಜಿನ ಸಾಹಿತ್ಯ ಎಂ. ಗೊಂಡಬಾಳ, ಗ್ರೀಷ್ಮಾ ಮಧುಸೂದನ್ ರಡ್ಡಿ, ಸಂಜನಾ ಶ್ರೀನಿವಾಸ ಹೋಟಕರ್, ಬೀಬಿ ಬತುರ್ ಆಫ್ಶೀನ್, ಮೊನಿಷಾ ಗಂಗಾಧರ್, ರಂಜಿತಾ ವೀರಭದ್ರ್ಪ, ಅಕ್ಷಯ ಯಾದವ್, ವೀಣಾ ವೆಂಕಟೇಶ, ಅಕ್ಷರ ಎಂ. ಗೊಂಡಬಾಳ, ಶಮಾ ಎಸ್. ಬಿಸರಳ್ಳಿ ಇದ್ದರು. ಸಾಧನೆ ಮಾಡಿದ ತಂಡಕ್ಕೆ ಕಾಲೇಜಿನ ಪ್ರಾಚಾರ್ಯ ಸತೀಶ, ನೆಟ್ ಬಾಲ್ ಅಸೋಸಿಯೇಷನ್ ಜಿಲ್ಲಾ ಕಾರ್ಯಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಅಭಿನಂದಿಸಿದ್ದಾರೆ. ವಿಜೇತರಿಗೆ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ತರಬೇತುದಾರರಾದ ಯತಿರಾಜ ಇತರರು ಬಹುಮಾನ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 