ವಿಶ್ವ ವಿಕಲಚೇತನ ದಿನಾಚರಣೆ ನಿಮಿತ್ಯ ಜಾಗೃತಿ ಶಿಬಿರ
Awareness camp on the occasion of World Disability Day
ಯಮಕನಮರಡಿ, 06 : ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಹಾಗೂ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಬೆಳಗಾವಿ ಇವರ ಸಹಯೋಗದಲ್ಲಿ "ವಿಶ್ವ ವಿಕಲಚೇತನ ದಿನಾಚರಣೆ" ನಿಮಿತ್ಯ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಅಂಗವಿಕಲತೆ ಬಗ್ಗೆ ಜಾಗೃತಿ ಶಿಬಿರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರದ ನೋಡಲ್ ಅಧಿಕಾರಿಗಳಾದ ಶ್ರೀಮತಿ ಮಂಜುಳಾ ಜಿಮ್ಮನ್ನವರ ಮಾತನಾಡಿ ಅಂಗವಿಕಲತೆಗೆ ಹಾಗೂ ಪರಿಣಾಮಗಳ ಕುರಿತು ವಿವರಿಸಿ ಅಂಗವಿಕಲರಿಗೆ ಇರುವ ಸರ್ಕಾರದ ಯೋಜನೆಗಳ ಕುರಿತು ವಿವರಿಸಿದರು.
ಅದರಂತೆ ಶ್ರೀಮತಿ ಐ.ಎಮ್.ಕುರಬೇಟ ಕ್ಲಿನಿಕಲ್ ಸೈಕಾಲಾಜಿಸ್ಟ ಬಿಮ್ಸ ಆಸ್ಪತ್ರೆ ಬೆಳಗಾವಿ ಇವರು ಮಾತನಾಡಿ ಅಂಗವಿಕಲತೆಯ ಪ್ರಕಾರಗಳ ಕುರಿತು ವಿದ್ಯಾರ್ಥಿಗಳಿಗೆ ಪವರ ಪಾಯಿಂಟ ಪ್ರೆಜೆಂಟೇಶನ್ ಮೂಲಕ ವಿಸ್ತಾರವಾಗಿ ವಿವರಿಸಿದರು.
ಮುಖ್ಯವಾಗಿ ಅಂಗವಿಕಲತೆಗೆ ಸಂಬಂಧಿಕರರಲ್ಲಿ ವಿವಾಹವಾಗುವುದು ದೈಹಿಕ ಅಂಗವಿಕಲತೆಗೆ ಪ್ರಮುಖ ಕಾರಣವಾಗುತ್ತದೆ ಎಂದು ತಿಳಿಸಿ ಎಲ್ಲ ರೀತಿಯ ಅಂಗವಿಕಲತೆಗೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎ.ರಾಮನಕಟ್ಟಿ ವಹಿಸಿದ್ದರು.
ಎನ್.ಎನ್.ಎಸ್. ಕಾರ್ಯಕ್ರಮ ಅಧಿಕಾರಿ .ಬಿ.ಬಿ.ಕೊಡ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಸ್ವಾಗತ ಕೋರಿದರು. ಶ್ರೀ ಗೋಪಾಲ್ ಚಪಣಿ ಪತ್ರಕರ್ತರು ಉಪಸ್ಥಿತಿ ಇದ್ದರು ಎಸ್.ಆರ್.ತಬರಿ ಕಾರ್ಯಕ್ರಮ ನಿರೂಪಿಸುತ್ತಾ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ಪ್ರಾರಂಭಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 