ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
Awareness marathon for a drug addiction free society: SP Dr. Suman D. Pannekar
ಬಳ್ಳಾರಿ 01: ಸಮಾಜದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆ, ರಸ್ತೆ ಅಪಘಾತಗಳು ಹಾಗೂ ಸೈಬರ್ ಅಪರಾಧ, ಬಾಲ್ಯ ವಿವಾಹ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮ್ಯಾರಾಥಾನ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದರು. ನಗರದ ಡಿಎಆರ್ ಮೈದಾನದಲ್ಲಿ ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ, ರಸ್ತೆ ಸುರಕ್ಷತೆ ಹಾಗೂ ಸೈಬರ್ ಅಪರಾಧ, ಬಾಲ್ಯ ವಿವಾಹ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಬಳ್ಳಾರಿ ಪೊಲೀಸ್ ರನ್(ಮ್ಯಾರಥಾನ್ ಮತ್ತು ವಾಕಾಥಾನ್) ಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯುವಕರನ್ನು ಡ್ರಗ್ಸ್ನಿಂದ ದೂರವಿರಿಸಿ, ಕ್ರೀಡೆ ಮತ್ತು ಆರೋಗ್ಯಕರ ಜೀವನಶೈಲಿಯತ್ತ ಒಲಿಸುವುದು. ಜೊತೆಗೆ ರಸ್ತೆ ಸುರಕ್ಷತೆ ನಿಯಮಗಳ ಪಾಲನೆ ರಕ್ಷಣೆ, ಬಾಲ್ಯ ವಿವಾಹ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ ಮೂಡಿಸುವುದು ಮ್ಯಾರಥಾನ್ನ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಈ ಜಾಗೃತಿ ಮ್ಯಾರಥಾನ್ ಅಭಿಯಾನವು ರಾಜ್ಯಾದ್ಯಂತ ನಡೆಯುತ್ತಿದ್ದು, ಬಳ್ಳಾರಿಯಲ್ಲಿ ಸತತವಾಗಿ ಇದು ಮೂರನೇ ಬಾರಿಯ ಆಯೋಜನೆಯಾಗಿದೆ. 5ಕೆ ಮತ್ತು 10ಕೆ ರನ್ ವಿಭಾಗದಲ್ಲಿ ಸಾವಿರಕ್ಕೂ ಅಧಿಕ ಮಂದಿ ಉತ್ಸಾಹದಿಂದ ನೋಂದಣಿ ಮಾಡಿಕೊಂಡು ಭಾಗವಹಿಸಿರುವುದು ಬಹಳ ಸಂತಸ ತಂದಿದೆ. ಹಿರಿಯ ನಾಗರಿಕರಿಗಾಗಿ ಪ್ರತ್ಯೇಕವಾಗಿ 2ಕೆ ವಾಕಥಾನ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಓಟದ ಮಾರ್ಗದುದ್ದಕ್ಕೂ ಸೈಬರ್ ಕ್ರೈಮ್ ಜಾಗೃತಿ ಹಾಗೂ ರಸ್ತೆ ಸುರಕ್ಷತೆಯ ಕುರಿತಾದ ಘೋಷಣೆಗಳು ಗಮನ ಸೆಳೆದವು. ಸಾರ್ವಜನಿಕರು ಮತ್ತು ಯುವಜನತೆ ಉತ್ಸಾಹದಿಂದ ಪಾಲ್ಗೊಂಡು ಜಾಗೃತಿ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಮ್ಯಾರಥಾನ್ನ ವಿವಿಧ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ನಗದು, ಪದಕ, ಪ್ರಶಸ್ತಿ ಪತ್ರ ಹಾಗೂ ಓಟದ ನಂತರ ಏರಿ್ಡಸಲಾಗಿದ್ದ ಕ್ವಿಜ್ ಸ್ಪರ್ಧೆಯಲ್ಲಿ ಸರಿಯಾದ ಉತ್ತರ ನೀಡಿದವರಿಗೆ ಬಹುಮಾನವಾಗಿ ಹೆಲ್ಮೆಟ್ ವಿತರಿಸಲಾಯಿತು. 5ಕೆ ರನ್ ವಿಜೇತರ ಪಟ್ಟಿ: ಪುರುಷರ ವಿಭಾಗ: ಪ್ರಥಮ- ಆನಂದ ನಿತಿನ್ (ಬಳ್ಳಾರಿ) ದ್ವಿತೀಯ- ಈರ್ಪ (ಬಾಗಲಕೋಟೆ) ತೃತೀಯ- ನಾಗರಾಜ್ (ಬೆಳಗಾವಿ).
ಮಹಿಳೆಯರ ವಿಭಾಗ:* ಪ್ರಥಮ- ಶಾಹೀನ್ (ಹುಬ್ಬಳ್ಳಿ) ದ್ವಿತೀಯ- ನೂರ್ ಜಹಾನ್ (ಬೆಳಗಾವಿ) ತೃತೀಯ- ವಿಜಯಲಕ್ಷ್ಮೀ (ಧಾರವಾಡ). 10ಕೆ ರನ್ ವಿಜೇತರ ಪಟ್ಟಿ: ಪುರುಷರ ವಿಭಾಗ: ಬೆಳಗಾವಿ ಶಿವಾನಂದ ಚಿಗಾರಿ(ಪ್ರಥಮ) ಬಳ್ಳಾರಿಯ ಚನ್ನಕೇಶವ (ದ್ವಿತೀಯ) ತುಮಕೂರಿನ ಧರಣಿ (ತೃತೀಯ). ಮಹಿಳೆಯರ ವಿಭಾಗ: ಬೆಳಗಾವಿಯ ಪ್ರಿಯಾ ಪಾಟೀಲ್ (ಪ್ರಥಮ) ಬಳ್ಳಾರಿಯ ಸೀರೀಷಾ (ದ್ವಿತೀಯ) ಬಳ್ಳಾರಿಯ ಉಮಾಮಹೇಶ್ವರಿ (ತೃತೀಯ). ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ನವೀನ್ ಕುಮಾರ್ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 