ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ
Awareness program on ZED and Lean project
ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ
ವಿಜಯಪುರ ಸೆಪ್ಟೆಂಬರ್,16 : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇತ್ತೀಚೆಗೆ ಸಿಂದಗಿಯ ಹೊಸ ಮಿನಿ ವಿಧಾನಸೌಧದ ಹತ್ತಿರದ ಹೋಟೆಲ್ ಡಾಲ್ಪಿನ್ನಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಂದಗಿ ನಗರ ಸಭೆಯ ಅಧ್ಯಕ್ಷರಾದ ಶಾಂತವೀರ ಎಂ ಮನಗೂಳಿ ಅವರು ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘದ ಉಪಾಧ್ಯಕ್ಷರಾದ ನಿಂಗಣ್ಣ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಕೈಗಾರಿಕಾ ಸಂಘಗಳ ಅಧ್ಯಕ್ಷರಾದ ಎಸ್.ವಿ.ಪಾಟೀಲ್, ಗಂಗಾಧರ ಸಂಬಣ್ಣಿ, ಪೀಟರ ಅಲೆಕ್ಸಾಂಡರ, ತಮ್ಮಣ್ಣ ಈಳಗೇರ, ಉಪಾಧ್ಯಕ್ಷರಾದ ಬಸವರಾಜ ಅಂಬಲಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಗಂಗಾಧರ ದೇಸಾಯಿ ಅವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 