ಆಯುರ್ವೇದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ
Ayurveda Continuing Medical Education Program
ಚಿಕ್ಕೋಡಿ 28: ಕೆಎಲ್ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ ಫೆಬ್ರವರಿ 27 ರಂದು ವೈದ್ಯರಿಗಾಗಿ ನಿರಂತರ ವೈದ್ಯಕೀಯ ಶಿಕ್ಷಣ (ಅಒಇ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಜೀವನಶೈಲಿ ಮತ್ತು ಚಯಾಪಚಯ ಕಾಯಿಲೆಗಳನ್ನು ಆಯುರ್ವೇದ ಚಿಕಿತ್ಸೆಗಳ ಮೂಲಕ ನಿರ್ವಹಣೆಯ ಕುರಿತು ಇಂದಿನ ಯುವ ವೈದ್ಯರಿಗೆ ಅರಿತುಕೊಳ್ಳಲು ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನದ ಕಣಜಗಳಾಗಿವೆ. ಇವುಗಳ ಸದುಪಯೋಗ ಪಡೆದುಕೊಳ್ಳುವದು ವೈದ್ಯರ ಜವಾಬ್ದಾರಿಯಾಗಿವೆ ಎಂದು ಕೆ ಎಲ್ ಇ ಕಾಲೇಜಿನ ಪ್ರಾಚಾರ್ಯರು ಡಾ. ಕಿರಣಕುಮಾರ ಮುತ್ನಾಳಿ ಅವರು ಉದ್ಘಾಟಿಸಿ ಮಾತನಾಡಿದರು.
ವೈಜ್ಞಾನಿಕ ಅಧಿವೇಶನಗಳಲ್ಲಿ ಡಾ. ಶ್ರೀಧರ್ ಎಸ್. ಲಕ್ಕುಂಡಿ ಅವರು ಮೆಟಬಾಲಿಕ್ ಸಿಂಡ್ರೋಮ್ ಮತ್ತು ಪಂಚಕರ್ಮದ ಪಾತ್ರಕುರಿತು ಉಪನ್ಯಾಸ ನೀಡಿದರು. ಡಾ. ಕಂಚನಾ ಸಾಗರಅವರು ಮೆಟಬಾಲಿಕ್ ಸಿಂಡ್ರೋಮ್ ಕುರಿತು ಪ್ರಕರಣಅಧ್ಯಯನ ಮಂಡಿಸಿದರು. ಡಾ. ಹರಿಶಂಕರ್ ಪಿ.ವಿ. ಅವರು ಗುದಗತ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಇತ್ತೀಚಿನ ಅಭಿವೃದ್ಧಿಗಳ ಬಗ್ಗೆ ವಿವರಿಸಿದರು.
ಡಾ. ಅಶ್ವಿನಿ ಕುಂಬಾರ ಅವರು ಡಯಾಬಿಟಿಕ್ ರೆಟಿನೋಪಥಿಗೆ ಆಯುರ್ವೇದ ಚಿಕಿತ್ಸಾ ವಿಧಾನಗಳ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಡಾ.ಡಿ.ಆರ್. ಮುಧೋಳ ಅವರನ್ನು ಸನ್ಮಾನಿಸಲಾಯಿತು. ‘ಪ್ರಗತಿಹಿ ಎ ನ್ಯೂಸ್’ ಮಾಸಪತ್ರಿಕೆಯ 2 ಮತ್ತು 3ನೇ ಸಂಚಿಕೆಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಾ.ಮಹಾಜನ, ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಮತ್ತು ಸ್ಥಳೀಯ ವೈದ್ಯರು ಭಾಗವಹಿಸಿದರು. ಕಾರ್ಯಕ್ರಮವನ್ನು ಡಾ.ನಿಹಾರಿಕಾ ನಿರೂಪಿಸಿದರು. ಡಾ. ಸೂರಜ ಕುಂಬಾರ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 