ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಬಸವರಾಜ, ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಅವಿರೋಧ ಆಯ್ಕೆ
B. Basavaraja elected unopposed as new president of cooperative society, Talawara Ganganna elected
ಕಂಪ್ಲಿ 06: ಪಟ್ಟಣದ ಮುದ್ದಾಪುರ ಅಗಸಿಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಬಸವರಾಜ ಹಾಗೂ ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಇವರು ಅವಿರೋಧವಾಗಿ ಆಯ್ಕೆಗೊಂಡರು.
ಹಿಂದಿನ ಅಧ್ಯಕ್ಷ ಕಟ್ಟೆ ಸಣ್ಣ ದುರುಗಪ್ಪ ಹಾಗೂ ಉಪಾಧ್ಯಕ್ಷ ಬಳೆ ಮಲ್ಲಿಕಾರ್ಜುನ ಇವರು ರಾಜಿನಾಮೆ ನೀಡಿದ ಹಿನ್ನಲೆ ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಇಲ್ಲಿನ ಸಹಕಾರ ಸಂಘದ ಕಛೇರಿಯಲ್ಲಿ ಶುಕ್ರವಾರ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಬಸವರಾಜ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಳವಾರ ಗಂಗಣ್ಣ ಇವರು ನಾಮಪತ್ರ ಸಲ್ಲಿಸಿದ್ದರು. ಇವರಿಬ್ಬರೂ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧವಾಗಿ ನೂತನ ಅಧ್ಯಕ್ಷರಾಗಿ ಬಸವರಾಜ ಮತ್ತು ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಆಯ್ಕೆಗೊಂಡರು.
ಈ ಚುನಾವಣೆ ಪ್ರಕ್ರಿಯೆ ವೇಳೆ ಚುನಾವಣಾಧಿಕಾರಿ ರಮೇಶ, ಮುಖ್ಯಕಾರ್ಯನಿರ್ವಾಹಕ ಹೆಚ್.ಈರಣ್ಣ, ನಿರ್ದೇಶಕರಾದ ಅಳ್ಳಿ ನಾಗರಾಜ, ಕಟ್ಟೆ ಸಣ್ಣ ದುರುಗಪ್ಪ, ಈರ್ಪ ಜೋಳಮಾರ, ಸಣ್ಣೆಪ್ಪ ಎಸ್. ರಾಜೇಶ ಶೆರೆಗಾರ, ಟಿ.ನಿರಂಜನಯ್ಯ, ಬಳೆ ಮಲ್ಲಿಕಾರ್ಜುನ, ಕೃಷ್ಣ ಕೆ, ಕೆ.ನಾಗಮ್ಮ, ಬಿಎಂ ವಿಶಾಲಾಕ್ಷಿ ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಅಯೋಧ್ಯ ವೆಂಕಟೇಶ, ಆಟೋ ರಘು, ಗುರು ರಾಮಸಾಗರ ಸೇರಿದಂತೆ ಸಿಬ್ಬಂದಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 