ಸಿ.ಎಂ ತಿಂಗಳಿಗೊಮ್ಮೆ ಜಿಲ್ಲೆಗೆ ಬೇಟಿ ನೀಡಲಿ ಬಿ.ಗೀರೀಶಾನಂದ ಆಗ್ರಹ
B. Girishananda demands that the CM visit the district once a month
ಸಿ.ಎಂ ತಿಂಗಳಿಗೊಮ್ಮೆ ಜಿಲ್ಲೆಗೆ ಬೇಟಿ ನೀಡಲಿ ಬಿ.ಗೀರೀಶಾನಂದ ಆಗ್ರಹ
ಕೊಪ್ಪಳ 05: ಸಿ.ಎಂ ಆಗಮನಕ್ಕಾಗಿ ತಾರತುರಿಯಲ್ಲಿ ರಸ್ತೆಗಳ ತಗ್ಗು ಗುಂಡಿಗಳನ್ನು ಮುಚ್ಚಿ ಅರೆ ಬರೆ ಕಾಮಗಾರಿಕೆಯ ಕೆಲಸಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಿರುವುದನ್ನು ಕರವೇ ಜಿಲ್ಲಾಧ್ಯಕ್ಷ ಬಿ.ಗೀರೀಶಾನಂದ ಜ್ಞಾನಸುಂದರ ಬಲವಾಗಿ ಖಂಡಿಸಿದ್ದಾರೆ.ರವಿವಾರದಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಸಾಲರಜಂಗ ರಸ್ತೆ, ಜವಾಹರ ರಸ್ತೆ, ಹಸನ್ ರಸ್ತೆ, ಭಾಗ್ಯನಗರ ಮುಖ್ಯ ರಸ್ತೆ, ಕಿನ್ನಾಳ ರಸ್ತೆ, ಕುಷ್ಟಗಿ ರಸ್ತೆ ಹಾಗೂ ಇನ್ನೂ ಅನೇಕ ರಸ್ತೆಗಳು ನಿರ್ಮಾಣಗೊಂಡು 15-20 ವರ್ಷಗಳು ಕಳೆದರೂ ಪುನಃ ನವಿಕರಣಕ್ಕೆ ಅನುದಾನದ ನೆಪ ಹೇಳುವ ಸರ್ಕಾರ, ಮುಖ್ಯಮಂತ್ರಿಗಳು ಬಂದರೆ ಮಾತ್ರ ರಸ್ತೆ ಅಭಿವೃದ್ಧಿ ಮಾಡುವುದು ಎಷ್ಷು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಕೂಡಲೇ ನಗರದ ಎಲ್ಲಾ ಮುಖ್ಯ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಇಲ್ಲವಾದರೆ ರಸ್ತೆ ಅಭಿವೃದ್ದಿಗೆ ಸಿ.ಎಂ ತಿಂಗಳಿಗೊಮ್ಮೆ ಜಿಲ್ಲೆಗೆ ಬೇಟಿ ನೀಡಲಿ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 