ಗಣರಾಜ್ಯೋತ್ಸವ ಪರೇಡ್‌ಗೆ ಬಿ.ಯು.ಒ. ಮಂಜುನಾಥ ದೇವರಡ್ಡಿ ಆಯ್ಕೆ

ಗಣರಾಜ್ಯೋತ್ಸವ ಪರೇಡ್‌ಗೆ ಬಿ.ಯು.ಒ. ಮಂಜುನಾಥ ದೇವರಡ್ಡಿ ಆಯ್ಕೆ B.U.O. Manjunatha Devaraddi selected for Republic Day Parade


ಧಾರವಾಡ 27: ಬಿ.ಯು.ಒ. ಮಂಜುನಾಥ ದೇವರಡ್ಡಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗಿದ್ದಾರೆ. ಇವರು ಧಾರವಾಡದ ವಿದ್ಯಾಗಿರಿಯ ಜೆಎಸ್‌ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದು, 3/1/28 ಏನ್‌. ಸಿ. ಸಿ. ಕಂಪನಿ ಜೆಎಸ್‌ಎಸ್ ಕಾಲೇಜಿನ ಏನ್‌. ಸಿ.ಸಿ.ಕೆಡೆಟ್‌. ಇವರ ಅಸಾಧಾರಣ ಸಾಧನೆಗೆ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಧಾರವಾಡದ ಜನತಾ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿಗಳಾದ ಅರಿಹಂತ ಜೈನ, ಧಾರವಾಡದ ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವೆಂಕಟೇಶ ಮುತಾಲಿಕ, ಆಡಳಿತ ಮಂಡಳಿ ಸದಸ್ಯರು ಹಾಗೂ ಜೆಎಸ್‌ಎಸ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.