ಬಿಜೆಪಿ ನಿರೀಕ್ಷೆ ಹುಸಿ: ನಿರಾಳವಾದ ದೋಸ್ತಿಗಳು
ಬೆಂಗಳೂರು 5: ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಬಿಜೆಪಿ ನಿರೀಕ್ಷೆ ಹುಸಿಯಾಗಿದೆ. ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸಕರ್ಾರ ಪತನದ ಭೀತಿಯಿಂದ ನಿರಾಳವಾಗಿದೆ.
ಅಮವಾಸ್ಯೆ ಕಳೆದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ನ ಕೆಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ.ಆಗ ಮೈತ್ರಿ ಸರಕಾರದ ಸಂಖ್ಯಾಬಲ ಅಲ್ಪ ಮೊತ್ತಕ್ಕೆ ಕುಸಿದು ಸಕರ್ಾರದ ಭವಿಷ್ಯಕ್ಕೆ ಕುತ್ತು ಬರಲಿದೆ ಎಂದು ಭಾವಿಸಲಾಗಿತ್ತು.
ಆದರೆ, ದೋಸ್ತಿಗಳ ಪ್ರತಿ ತಂತ್ರದ ಪರಿಣಾಮ ಶಾಸಕರೂ ರಾಜೀನಾಮೆ ಕೊಡದಿರುವುದರಿಂದ ಮೈತ್ರಿ ನಾಯಕರು ಯಾವುದೇ ಭೀತಿ ಇಲ್ಲದೆ ನಿಶ್ಚಿಂತೆಯಲ್ಲಿದ್ದಾರೆ. ರಮೇಶ ಜಾರಕಿ ಹೊಳಿ ರಾಜೀನಾಮೆ ನೀಡಿದ ತಕ್ಷಣ ಅವರ ಆಪ್ತ ಶಾಸಕ ಮಹೇಶ್ ಕುಮಟಳ್ಳಿ, ಶ್ರೀಮಂತಪಾಟೀಲ್, ಪ್ರತಾಪ್ ಗೌಡ ಪಾಟೀಲ್, ನಾಗೇಂದ್ರ ಮತ್ತಿತರ ಶಾಸಕರು ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗಿತ್ತು. ಮಂಗಳವಾರ ಒಂದು ದಿನ ಬೆಳಿಗ್ಗೆ ಶಾಸಕ ಆನಂದ್ ಸಿಂಗ್ ಹಾಗೂ ಮಧ್ಯಾಹ್ನ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿದಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಕರ್ಾರ ಪತನವಾಗಲಿದೆಯೇ ಎಂಬ ಆತಂಕಕ್ಕೊಳಗಾಗಿದ್ದರು. ಸಕರ್ಾರ ಉಳಿಸಿಕೊಳ್ಳಲು ಆಪರೇಷನ್ ಕಮಲಕ್ಕೆ ಪ್ರತಿ ತಂತ್ರ ಹೆಣೆಯುತ್ತಿದ್ದರು. ಕಳೆದ ಮೂರು ದಿನಗಳ ರಾಜಕೀಯ ಚಟುವಟಿಕೆಗಳನ್ನು ಗಮನಿಸಿದರೆ ಸದ್ಯಕ್ಕೆ ಅತೃಪ್ತ ಶಾಸಕರು ರಾಜೀನಾಮೆ ನೀಡುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ.
ಮೈತ್ರಿ ಸರಕಾರಕ್ಕೆ ಯಾವುದೇ ಅಪಾಯ ಎದುರಾಗುವ ಸಾಧ್ಯತೆಗಳೂ ಕಾಣುತ್ತಿಲ್ಲ ಎಂದು ಹೇಳಲಾಗುತ್ತಿದೆ.
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು 