ಜಿ.ಟಿ ದೇವೇಗೌಡಗೆ ಬಿಜೆಪಿ ಸೇರಲು ಆಹ್ವಾನ
ಬೆಂಗಳೂರು 15: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಗೆ ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಸಚಿವ ಜಿಟಿ ದೇವೇಗೌಡ ಅವರಿಗೆ ಸ್ವಾಗತ ಎಂದು ಕೆಲ ಬಿಜೆಪಿ ಕಾರ್ಯಕರ್ತರು ಸೋಮವಾರ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ.
ಬಿಜೆಪಿಗೆ ಬರುತ್ತಿರುವ ಸಚಿವ ಜಿಟಿ ದೇವೇಗೌಡರಿಗೆ ಸ್ವಾಗತ. ಜೆಡಿಎಸ್ ತೊರೆದು ಬಿಜೆಪಿಗೆ ಬನ್ನಿ. ಸಮ್ಮಿಶ್ರ ಸಕರ್ಾರ ನಿಮಗೆ ಮೋಸ ಮಾಡಿದೆ. ಒಬ್ಬ ಮುಖ್ಯಮಂತ್ರಿ ಯನ್ನು ಸೋಲಿಸಿದ ನಿಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಹುಣಸೂರಿನಲ್ಲಿ ನಿಮ್ಮ ಮಗನಿಗೆ ಅನ್ಯಾಯವಾಗಿದೆ. ಮರಳಿ ಬಿಜೆಪಿಗೆ ಬನ್ನಿ ಎಂದು ಆಹ್ವಾನ ನೀಡಿರುವ ಬಿಜೆಪಿ ಕಾರ್ಯಕರ್ತರ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ಜಿಟಿ ದೇವೇಗೌಡರು ಬಿಜೆಪಿಯಲ್ಲಿದ್ದರು. ಕೆಲ ವರ್ಷಗಳ ಹಿಂದೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದರು. ಇತ್ತೀಚೆಗೆ ಜಿಟಿಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೇಳಿಕೆ ನೀಡಿದ್ದರು. ಈ ಸಂದರ್ಭದಲ್ಲಿ ಈ ಪೋಸ್ಟ್ ಚರ್ಚೆ ಗ್ರಾಸವಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 