ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡಿರಿಂದ ಪ್ರತಿಭಟನೆ
BJP leaders protest against Congress government
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡಿರಿಂದ ಪ್ರತಿಭಟನೆ
ರಾಯಬಾಗ, 05: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಯಬಾಗ ಮಂಡಲ ವತಿಯಿಂದ ಪಟ್ಟಣದ ಝೇಂಡಾ ಕಟ್ಟೆ ಹತ್ತಿರ ಮುಖ್ಯ ರಸ್ತೆ ಬಂದ ಮಾಡಿ ಬಿಜೆಪಿ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.
ಶಾಸಕ ಡಿ.ಎಮ್.ಐಹೊಳೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಈಗ ದಿನಬಳಕೆ ವಸ್ತು ಮತ್ತು ಸೇವೆಗಳ ದರಗಳನ್ನು ಹೆಚ್ಚಿಸಿ ರೈತರಿಗೆ, ದಲಿತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ 18 ಬಿಜೆಪಿ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಿರುವುದು ಖಂಡನೀಯವಾಗಿದ್ದು, ಕೂಡಲೇ ಅಮಾನತು ಆದೇಶ ಹಿಂಪಡೆಬೇಕೆಂದು ಒತ್ತಾಯಿಸಿದರು.
ರೈತ, ದಲಿತ ಮತ್ತು ಜನವಿರೋಧಿ ಸರ್ಕಾರವನ್ನು ಕಿತ್ತು ಒಗೆಯುವವರಿಗೆ ನಮ್ಮ ಪ್ರತಿಭಟನೆ ನಿರಂತವಾಗಿರಲಿದೆ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ರಾಯಬಾಗ ಬಿಜೆಪಿ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಮುಖಂಡರಾದ ಮಲ್ಲಪ್ಪ ಮೈಶಾಳೆ, ರಾಜಶೇಖರ ಖನದಾಳೆ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಸದಾನಂದ ಹಳಿಂಗಳಿ, ಮಹಾದೇವ ಬೊರಗಾಂವೆ, ಬಸವರಾಜ ಡೊಣವಾಡೆ, ಅಪ್ಪಾಸಾಬ ಬ್ಯಾಕೂಡೆ, ಗಂಗಾಧರ ಮೈಶಾಳೆ, ನಿಂಗಪ್ಪ ಪಕಾಂಡಿ, ಸುಭಾಷ ಕೋರೆ, ಅನೀಲ ಹಂಜೆ, ರಾಜು ಹರಗನ್ನವರ, ಕಲ್ಲಪ್ಪ ನಿಂಗನೂರೆ, ರಾಜು ಹಳಬರ ಸೇರಿ ಅನೇಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 