ಟಿಎಪಿಸಿಎಂ ನಿರ್ದೇಶಕರಾಗಿ ಬಗಲಿ ಅವಿರೋಧ ಆಯ್ಕೆ
Bagali elected unopposed as TAPCM director
ಟಿಎಪಿಸಿಎಂ ನಿರ್ದೇಶಕರಾಗಿ ಬಗಲಿ ಅವಿರೋಧ ಆಯ್ಕೆ
ತಾಳಿಕೋಟಿ 15: ಮುದ್ದೇಬಿಹಾಳ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಐದು ವರ್ಷದ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಾಲೂಕಿನ ತಮದಡ್ಡಿ ಗ್ರಾಮದ ಬಸವರಾಜ ಚನ್ನಮಲ್ಲಪ್ಪ ಬಗಲಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 12 ಸ್ಥಾನದ ನಿರ್ದೇಶಕ ಮಂಡಳಿಯ ಈ ಚುನಾವಣೆಯಲ್ಲಿ ಬಸವರಾಜ ಬಗಲಿ ಅವರು ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈಗಾಗಲೇ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮನ್ನು ಅವಿರೋಧ ಆಯ್ಕೆಗೆ ಎಲ್ಲ ರೀತಿಯಿಂದಲೂ ಸಹಕರಿಸಿದ ಕೆ ಎಸ್ ಡಿ ಎಲ್ ಅಧ್ಯಕ್ಷರು, ಶಾಸಕರಾದ ಅಪ್ಪಾಜಿ ನಾಡಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿಎಸ್ ಪಾಟೀಲ(ಯಾಳಗಿ), ಮುಖಂಡರಾದ ಗುರು ತಾರನಾಳ, ಎಂ.ಎಸ್.ಮೇಟಿ, ಸಂಗನಗೌಡ ಪಾಟೀಲ (ಕವಡಿಮಟ್ಟಿ), ನಾನಾಗೌಡ ಹೊಸಳ್ಳಿ (ತಮದಡ್ಡಿ),ರಾಜುಗೌಡ ಕನಕರೆಡ್ಡಿ ಚಂದ್ರಶೇಖರ ಸಾಸ್ನೂರ ಅವರಿಗೆ ಬಗಲಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 