ಬಾಗಲಕೋಟೆ: ಎಂ.ಎನ್.ಆರ್.ಸಿ ಕೇಂದ್ರ ದಾಖಲಾತಿ ಪ್ರಮಾಣ ಹೆಚ್ಚಳ
ಲೋಕದರ್ಶನ ವರದಿ
ಬಾಗಲಕೋಟೆ 09: ರಾಷ್ಟ್ರೀಯ ಆರೋಗ್ಯ ಅಭಿಯಾದಡಿ ಹುನಗುಂದ ತಾಲೂಕಾ ಆಸ್ಪತ್ರೆಯಲ್ಲಿ ಇರುವ ಎಂ.ಎನ್.ಆರ್.ಸಿ ಕೇಂದ್ರ ಪುನಶ್ಚೇತನದಿಂದ ಮಕ್ಕಳ ದಾಖಲಾತಿ ಪ್ರಮಾಣದಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2012ರಲ್ಲಿಯೇ ಎಂ.ಎನ್.ಆರ್.ಸಿ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಆದರೆ ಹಾಜರಾಗಿ ಪ್ರಮಾಣದಲ್ಲಿ ಕಡಿಮೆ ಇದ್ದದ್ದನ್ನು ಮನಗಂಡ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅವರು ಸದರಿ ಎಂ.ಎನ್.ಆರ್.ಸಿ ಕೇಂದ್ರವನ್ನು ಪುನಶ್ಚೇತನಗೊಳಿಸಲು ಮಾರ್ಗದರ್ಶನ ನೀಡಿದ್ದರು. ಈ ನಿಟ್ಟಿನಲ್ಲಿ ಮಕ್ಕಳಿಗೆ ಆಕರ್ಷಣೀಯವಾಗಿ ಕಾಣಲೂ ವಿವಿಧ ಗೋಡೆ ಚಿತ್ರಗಳನ್ನು ಬಿಡಿಸಲಾಗಿದೆ. ಅಲ್ಲದೇ ಮಕ್ಕಳಿಗೆ ಆಟಿಕೆ ಸಾಮಾನುಗಳನ್ನು ಒದಗಿಸಲಾಗಿದೆ.
ಮಗುವಿನ ಜೊತೆ ಬರುವ ತಾಯಂದಿರಿಗೆ ಎನ್.ಆರ್.ಇ.ಜಿ ದರದ ಪ್ರಕಾರ 14 ದಿನ ಹಣ ಸಂದಾಯ ಮಾಡಲಾಗುತ್ತಿದೆ. ಪುನಶ್ಚೇತನಗೊಂಡ ಕೇಂದ್ರವನ್ನು ಬಸವ ಜಯಂತಿ ದಿನದಂದು ಪ್ರಾರಂಭಿಸಲಾಗಿದ್ದು, ಪ್ರಾಂಭವಾದ ದಿನದಿಂದ ಮೇ ಅಂತ್ಯಕ್ಕೆ ಒಟ್ಟು 8 ಮಕ್ಕಳು ಚಿಕಿತ್ಸೆ ಪಡೆದಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 