ಬಾಗಲಕೋಟೆ: ಎಂ.ಎನ್.ಆರ್.ಸಿ ಕೇಂದ್ರ ದಾಖಲಾತಿ ಪ್ರಮಾಣ ಹೆಚ್ಚಳ
ಲೋಕದರ್ಶನ ವರದಿ
ಬಾಗಲಕೋಟೆ 09: ರಾಷ್ಟ್ರೀಯ ಆರೋಗ್ಯ ಅಭಿಯಾದಡಿ ಹುನಗುಂದ ತಾಲೂಕಾ ಆಸ್ಪತ್ರೆಯಲ್ಲಿ ಇರುವ ಎಂ.ಎನ್.ಆರ್.ಸಿ ಕೇಂದ್ರ ಪುನಶ್ಚೇತನದಿಂದ ಮಕ್ಕಳ ದಾಖಲಾತಿ ಪ್ರಮಾಣದಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2012ರಲ್ಲಿಯೇ ಎಂ.ಎನ್.ಆರ್.ಸಿ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಆದರೆ ಹಾಜರಾಗಿ ಪ್ರಮಾಣದಲ್ಲಿ ಕಡಿಮೆ ಇದ್ದದ್ದನ್ನು ಮನಗಂಡ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅವರು ಸದರಿ ಎಂ.ಎನ್.ಆರ್.ಸಿ ಕೇಂದ್ರವನ್ನು ಪುನಶ್ಚೇತನಗೊಳಿಸಲು ಮಾರ್ಗದರ್ಶನ ನೀಡಿದ್ದರು. ಈ ನಿಟ್ಟಿನಲ್ಲಿ ಮಕ್ಕಳಿಗೆ ಆಕರ್ಷಣೀಯವಾಗಿ ಕಾಣಲೂ ವಿವಿಧ ಗೋಡೆ ಚಿತ್ರಗಳನ್ನು ಬಿಡಿಸಲಾಗಿದೆ. ಅಲ್ಲದೇ ಮಕ್ಕಳಿಗೆ ಆಟಿಕೆ ಸಾಮಾನುಗಳನ್ನು ಒದಗಿಸಲಾಗಿದೆ.
ಮಗುವಿನ ಜೊತೆ ಬರುವ ತಾಯಂದಿರಿಗೆ ಎನ್.ಆರ್.ಇ.ಜಿ ದರದ ಪ್ರಕಾರ 14 ದಿನ ಹಣ ಸಂದಾಯ ಮಾಡಲಾಗುತ್ತಿದೆ. ಪುನಶ್ಚೇತನಗೊಂಡ ಕೇಂದ್ರವನ್ನು ಬಸವ ಜಯಂತಿ ದಿನದಂದು ಪ್ರಾರಂಭಿಸಲಾಗಿದ್ದು, ಪ್ರಾಂಭವಾದ ದಿನದಿಂದ ಮೇ ಅಂತ್ಯಕ್ಕೆ ಒಟ್ಟು 8 ಮಕ್ಕಳು ಚಿಕಿತ್ಸೆ ಪಡೆದಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 