ಬಾಗಲಕೋಟೆ: ಭಾರಿ ವಾಹನಗಳನ್ನು ನಿರ್ಬಂಧಿಸಲು ಆಗ್ರಹ
ಲೋಕದರ್ಶನ ವರದಿ
ಬಾಗಲಕೋಟೆ 21: ಬಾಗಲಕೋಟೆ ನಗರ ಮೂಲಕ ಹಾಯ್ದು ಹೋಗುವ ಭಾರಿ ವಾಹನಗಳನ್ನು ಗದ್ದನಕೇರಿ ಕ್ರಾಸ್ನಿಂದ, ಸಂಗಮ ಕ್ರಾಸ್ವರೆಗೆ ನಿರ್ಬಂಧಿಸಬೇಕು ಎಂದು ನಾಗರಿಕ ಹಿತ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.
ವೇದಿಕೆ ಮುಖಂಡ ನಾಗರಾಜ ಹದ್ಲಿ ನೇತೃತ್ವದಲ್ಲಿ ನಗರದ ಸಾರ್ವಜನಿಕರು, ಕಾರ್ಯಕರ್ತರು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿ ವಾಹನಗಳ ಪ್ರವೇಶ ನಗರದಲ್ಲಿ ನಿರ್ಬಂಧಿಸಬೇಕು ಎಂದು ಮನವಿ ಸಲ್ಲಿಸಿದರು.
ನಗರದ ಎರಡು ಬದಿಗಳಲ್ಲಿ ಬೀದಿ ವ್ಯಾಪಾರಸ್ಥರು, ಅಂಗಡಿಕಾರರು ಹಾಗೂ ಬಿವಿವಿ ಸಂಘದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಸಾವಿರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಭಾರಿ ವಾಹನಗಳು ಬೇಕಾಬಿಟ್ಟಿಯಾಗಿ ಸಂಚರಿಸುವುದರಿಂದ ಪ್ರತಿವರ್ಷ ಸಾಕಷ್ಟು ಪ್ರಮಾಣದಲ್ಲಿ ಜೀವಹಾನಿಗಳಾಗುತ್ತಿವೆ. ವ್ಯಾಪಾರ ವಹಿವಾಟಕ್ಕೂ ಸಮಸ್ಯೆಯಾಗುತ್ತಿದೆ ಎಂದು ದೂರಿದರು.
ಈ ಹಿಂದೆ ಅನೇಕ ಸಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಬಾರಿ ಗಂಭೀರವಾಗಿ ಪರಿಗಣಿಸಿ ಬಾಗಲಕೋಟೆ ನಗರದ ಮೂಲಕ ಹಾಯ್ದು ಹೋಗುವ ಗದ್ದನಕೇರಿ ಕ್ರಾಸ್-ಸಂಗಮ ಕ್ರಾಸ್ ನಡುವೆ ಭಾರಿ ವಾಹನಗಳನ್ನು ನಿರ್ಬಂಧಿಸಬೇಕು ಎಂದು ಮನವಿ ಮಾಡಿದರು.
ಚನ್ನವೀರ ಅಂಗಡಿ, ಕೇಶವ ಕುಲಕರ್ಣಿ, ಪ್ರಶಾಂತ ಹೂಗಾರ, ಗೋಪಾಲಕಷ್ಣ ಹಳಪೇಟಿ, ಮಂಜುನಾಥ .ಎಸ್.ಪಿ, ಸಂದೀಪ ಬೆಳಗಲ್ಲ, ಎಲ್.ಪಿ. ಚಿನಿವಾಲ ಇತರರು ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 