16ನೇ ದಿನದತ್ತ ಬಗರ್ಹುಕುಂ ರೈತರ ಅಹೋರಾತ್ರಿ ಧರಣಿ
Bagarhukum farmers' day-night protest enters 16th day
16ನೇ ದಿನದತ್ತ ಬಗರ್ಹುಕುಂ ರೈತರ ಅಹೋರಾತ್ರಿ ಧರಣಿ
ಗದಗ 02:ಜಿಲ್ಲೆಯ ಬಗರ್ಹುಕುಂ ರೈತರ ಹೋರಾಟ 16ನೇ ದಿನವೂ ಮುಂದುವರೆದಿದ್ದು, ರೈತರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರೋಧ ನೀತಿ ಖಂಡಿಸಿ ಇಂದು 12 ಗಂಟೆಯಿಂದ ಜಿಲಾಧಿಕಾರಿಗಳ ಕಛೇರಿ ಎದುರು ಅರೆಬೆತ್ತಲೆ ಹೋರಾಟಕ್ಕೆ ಬಗರ್ ಹುಕುಂ ರೈತರು ನಿರ್ಧರಿಸಿದ್ದಾರೆ.
ಹಂತಹಂತವಾಗಿ ರೈತರು ತಮ್ಮ ಹೋರಾಟದ ರೂಪರೇಷವನ್ನು ಬದಲಾಯಿಸುತ್ತಿದ್ದು, ದಯಾಮರಣಕ್ಕೆ ಇನ್ನೆರಡು ದಿನದಲ್ಲಿ ರೈತರು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡುವ ನಿರ್ಧಾರವನ್ನು ಮಾಡಿದ ಬೆನ್ನಲ್ಲೇ ಮಂಗಳವಾರ ರೈತರೆಲ್ಲ ಸೇರಿ ಜಿಲ್ಲಾಡಳಿತ ಭವನದೆದುರು ಅರೆಬೆತ್ತಲೆ ಹೋರಾಟವನ್ನು ಮಾಡಿ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಲು ತಿರ್ಮಾನಿಸಿದ್ದಾರೆ.
ಜಿಲ್ಲೆಯ ರೈತರು ಬಗರ್ಹುಕುಂ ಮತ್ತು ಅರಣ್ಯ ಭೂಮಿ ಅವಲಂಬಿತ ರೈತರು ಹಾಗೂ ನಾಗಾವಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕಾಗಿ ತಮ್ಮ ಜಮೀನುಗಳನ್ನು ಕಳೆದುಕೊಂಡಿರುವುದರಿಂದ, ಸರ್ಕಾರದಿಂದ ಹಕ್ಕು ಪತ್ರ ಮತ್ತು ಪರಿಹಾರ ದೊರೆಯಬೇಕೆಂದು ದಿನಾಂಕ: 19.08.2025ರಿಂದ ಇಂದಿನವರೆಗೂ ಅಹೋರಾತ್ರಿ ಹೋರಾಟ ನಡೆಯುತ್ತಿದ್ದು, ಈ ಹಿಂದೆ 2023ರಲ್ಲಿ ಇದೇ ರೀತಿಯ ಅಹೋರಾತ್ರಿ ಧರಣಿ ನಡೆದಾಗ ಸಚಿವ ಎಚ್.ಕೆ.ಪಾಟೀಲರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಸಚಿವರು ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮಗಳಿಗೆ ಹಾಜರಾಗಿ ಧರಣಿ ನಿರತ ಮಾರ್ಗದಲ್ಲಿ ಹೋದರು ಮಾನವಿಯತೆಯ ಹಿತದೃಷ್ಟಿಯಿಂದ ಭೇಟಿಯಾಗದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಪೂರ್ತಿ ಸ್ವಯಂ ಸೇವಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ರೂಪಾ ನಾಯ್ಕ ಮಾತನಾಡುತ್ತಾ ಸುಮಾರೂ ಇಪ್ಪತ್ತೈದು ವರ್ಷಗಳಿಂದ ನಮ್ಮ ಸಂಸ್ಥೆ ಅರಣ್ಯ ಭೂಮಿ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡಿ ದಾವಣಗೇರೆ ಜಿಲ್ಲೆಯಲ್ಲಿ ಅನೇಕ ರೈತರಿಗೆ ಹಕ್ಕು ಪತ್ರಗಳನ್ನು ನೀಡಿದ್ದಾರೆ. ಧರಣಿ ನಿರತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಜಿಲ್ಲಾಡಳಿತ ರೈತರ ಬೇಡಿಕೆಗಳನ್ನು ಇಡೇರಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡಬೇಕು. ಸತತ 15 ದಿನಗಳಿಂದ ಈ ಹೋರಾಟ ನಡೆಯುತ್ತಿದ್ದು, ಆದರೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲರು ರೈತರನ್ನು ಸೌಜನ್ಯಕ್ಕಾದರು ಭೇಟಿಯಾಗದಿರುವುದು ಅವರ ಹಿರಿತನಕ್ಕೆ ಶೋಭೆ ತರುವುದಿಲ್ಲಾ ಹೀಗಾಗಿ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರು ಕೂಡಲೇ ರೈತರ ಬೇಡಿಕೆಗಳಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದರು.
ಪ್ರತಿಭಟನಾ ಸ್ಥಳದಲ್ಲಿ ಮಾಜಿ ತಾ.ಪಂ ಅಧ್ಯಕ್ಷ ಬಿ.ಎಸ್.ಚಿಂಚಲಿ, ಎನ್.ಟಿ.ಪೂಜಾರ, ಚಂಬಣ್ಣ ಚನ್ನಪಟ್ಟಣ, ನಾಮದೇವ, ನಿಂಗಪ್ಪ, ಚನ್ನಪ್ಪ ಭಗತ್, ಫಿರೋಜ್ ನಧಾಪ್, ಎಮ್ ಶಲವಡಿ ಸೇರಿದಂತೆ ಜಿಲ್ಲೆಯ ಅನೇಕ ರೈತರು, ಮಹಿಳೆಯರು ಹಾಗೂ ಹೋರಾಟಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 