ಬೈಲಹೊಂಗಲ:ಗ್ರಾಮೀಣ ಕ್ರೀಡೆಗಳನ್ನು ಉಳಿಸಿ:ಮಹಾಂತೇಶ ಶಾಸ್ತ್ರೀ ಆರಾದ್ರಿಮಠ
ಬೈಲಹೊಂಗಲ 26: ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆ ಇದೆ ಎಂದು ಡಾ. ಮಹಾಂತೇಶ ಶಾಸ್ತ್ರೀ ಆರಾದ್ರಿಮಠ ಹೇಳಿದರು.
ಅವರು ಸೋಮವಾರ ಪಟ್ಟಣದ ಮುರಗೋಡ ರಸ್ತೆಯ ಬಸವನಗರದಲ್ಲಿರುವ ದುಗರ್ಾದೇವಿ ದೇವಸ್ಥಾನದ 11 ನೇ ವರ್ಷದ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀಮಾತಾ ಸಂಭ್ರಮ 2019 ರ ಅಂಗವಾಗಿ ರಾಷ್ಟ್ರಮಟ್ಟದ ಭಾರಿ ಜಿದ್ದಾಜಿದ್ದಿ ಟಗರಿನ ಕಾಳಗಕ್ಕೆ ಚಾಲನೆ ನೀಡಿ ಮಾತನಾಡಿ, ಮನರಂಜನೆಗಾಗಿ ಗ್ರಾಮೀಣ ಪ್ರದೇಶದ ಜನರು ಹಲವಾರು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಪುರಾತನ ಕ್ರೀಡೆಗಳನ್ನು ಜೀವಂತವಾಗಿ ಇರುವಂತೆ ನೋಡಿಕೊಳ್ಳುತ್ತಿದ್ದರು. ಇಂದಿನ ಆಧುನಿಕ ಕಾಲದ ಯುವ ಜನತೆ ಪಾಶ್ಚಿಮಾತ್ಯದ ಕ್ರೀಡೆಗಳಿಗೆ ಮಾರುಹೋಗಿ ಗ್ರಾಮೀಣ ಕ್ರೀಡೆಗಳನ್ನು ಮರೆಯುತ್ತಿದ್ದಾರೆ ಎಂದರು.
ಗ್ರಾಮೀಣ ಕ್ರೀಡೆಗಳು ಕೇವಲ ಮನರಂಜನೆಗಾಗಿ ಅಲ್ಲದೆ ದೇಹಕ್ಕೆ ಉತ್ತಮ ಆರೋಗ್ಯ ಒದಗಿಸುವಲ್ಲಿ ಸಹಕಾರಿಯಾಗುತ್ತಿದ್ದವು. ಆದರೆ ಇಂದಿನ ಆಧುನಿಕ ಯುಗವು ಕೇವಲ ಪಾಶ್ಚಿಮಾತ್ಯದ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವಲ್ಲಿ ಮರೆಯುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದರು.
ರಾಜು ಕುಡಸೋಮನ್ನವರ, ಸುಭಾಸ ತುರಮರಿ, ಸಂತೋಷ ರಾಯರ, ಮಹಾಂತೇಶ ಇಂಚಲ ಹಾಗೂ ಕ್ರೀಡಾಭಿಮಾನಿಗಳು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 