ಬೈಲಹೊಂಗಲ:ಗ್ರಾಮೀಣ ಕ್ರೀಡೆಗಳನ್ನು ಉಳಿಸಿ:ಮಹಾಂತೇಶ ಶಾಸ್ತ್ರೀ ಆರಾದ್ರಿಮಠ
ಬೈಲಹೊಂಗಲ 26: ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆ ಇದೆ ಎಂದು ಡಾ. ಮಹಾಂತೇಶ ಶಾಸ್ತ್ರೀ ಆರಾದ್ರಿಮಠ ಹೇಳಿದರು.
ಅವರು ಸೋಮವಾರ ಪಟ್ಟಣದ ಮುರಗೋಡ ರಸ್ತೆಯ ಬಸವನಗರದಲ್ಲಿರುವ ದುಗರ್ಾದೇವಿ ದೇವಸ್ಥಾನದ 11 ನೇ ವರ್ಷದ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀಮಾತಾ ಸಂಭ್ರಮ 2019 ರ ಅಂಗವಾಗಿ ರಾಷ್ಟ್ರಮಟ್ಟದ ಭಾರಿ ಜಿದ್ದಾಜಿದ್ದಿ ಟಗರಿನ ಕಾಳಗಕ್ಕೆ ಚಾಲನೆ ನೀಡಿ ಮಾತನಾಡಿ, ಮನರಂಜನೆಗಾಗಿ ಗ್ರಾಮೀಣ ಪ್ರದೇಶದ ಜನರು ಹಲವಾರು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಪುರಾತನ ಕ್ರೀಡೆಗಳನ್ನು ಜೀವಂತವಾಗಿ ಇರುವಂತೆ ನೋಡಿಕೊಳ್ಳುತ್ತಿದ್ದರು. ಇಂದಿನ ಆಧುನಿಕ ಕಾಲದ ಯುವ ಜನತೆ ಪಾಶ್ಚಿಮಾತ್ಯದ ಕ್ರೀಡೆಗಳಿಗೆ ಮಾರುಹೋಗಿ ಗ್ರಾಮೀಣ ಕ್ರೀಡೆಗಳನ್ನು ಮರೆಯುತ್ತಿದ್ದಾರೆ ಎಂದರು.
ಗ್ರಾಮೀಣ ಕ್ರೀಡೆಗಳು ಕೇವಲ ಮನರಂಜನೆಗಾಗಿ ಅಲ್ಲದೆ ದೇಹಕ್ಕೆ ಉತ್ತಮ ಆರೋಗ್ಯ ಒದಗಿಸುವಲ್ಲಿ ಸಹಕಾರಿಯಾಗುತ್ತಿದ್ದವು. ಆದರೆ ಇಂದಿನ ಆಧುನಿಕ ಯುಗವು ಕೇವಲ ಪಾಶ್ಚಿಮಾತ್ಯದ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವಲ್ಲಿ ಮರೆಯುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದರು.
ರಾಜು ಕುಡಸೋಮನ್ನವರ, ಸುಭಾಸ ತುರಮರಿ, ಸಂತೋಷ ರಾಯರ, ಮಹಾಂತೇಶ ಇಂಚಲ ಹಾಗೂ ಕ್ರೀಡಾಭಿಮಾನಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 