ಬಾಂಗ್ಲಾದೇಶ: ಲಿಟೊನ್ ಹತ್ಯೆ ಪ್ರಕರಣ, ಏಳು ಮಂದಿಗೆ ಮರಣದಂಡನೆ ಶಿಕ್ಷೆ
BANGLADESH SUPREME
ಡಾಕಾ, ನ 28- ಸುಂದರ್ಗಂಜ್ನ ಗೈಬಂದಾ ಲೋಕಸಭಾ ಕ್ಷೇತ್ರದ ಅವಾಮಿ ಲೀಗ್ ಪಕ್ಷದ ಮಾಜಿ ಸಂಸದ ಮಂಜುರಲ್ ಇಸ್ಲಾಮ್ ಲಿಟೊನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಬಾಂಗ್ಲಾದೇಶ ನ್ಯಾಯಾಲಯವೊಂದು ಗುರುವಾರ ಏಳು ತಪ್ಪಿತಸ್ಥರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.
ಮಾಜಿ ಸಂಸದ ಹಾಗೂ ಜಾತಿಯಾ ಪಕ್ಷದ ಮಾಜಿ ಉಪಾಧ್ಯಕ್ಷ ಅಬ್ದುಲ್ ಖಾದರ್ ಖಾನ್, ಅವರ ಆಪ್ತ ಕಾರ್ಯದರ್ಶಿ ಶಂಸುಜೊಹಾ, ಚಾಲಕ ಅಬ್ದುಲ್ ಹನ್ನನ್, ಮನೆ ಕೆಲಸಗಾರ, ಶಹಿನ್ ಮಿಯಾ, ಮೆಹಿದಿ ಹಸನ್, ಅನ್ವರುಲ್ ಇಸ್ಲಾಮ್ ರಾಣಾ ಮತ್ತು ಚಂದನ್ ಕುಮಾರ್ ಸರ್ಕಾರ್ ಅವರನ್ನು ತಪ್ಪಿತಸ್ಥರೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ದಿಲೀಪ್ ಕುಮಾರ್ ಭೌಮಿಕ್ ತೀರ್ಪು ನೀಡಿ, ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ.
ಹತ್ಯೆ ನಂತರ ಏಳು ಆರೋಪಿಗಳ ಪೈಕಿ ಆರು ಮಂದಿ ಜೈಲಿನಲ್ಲಿದ್ದಾರೆ. ಆದರೆ, ಚಂದನ್ ಕುಮಾರ್ ಸರ್ಕಾರ್ ದೇಶದಿಂದ ಪಲಾಯನಗೈದಿದ್ದಾನೆ.
2016ರ ಡಿಸೆಂಬರ್ 31ರಂದು ಮಂಜುರಲ್ ಇಸ್ಲಾಮ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಿದ್ದರು.
ನಿನ್ನೆಯಷ್ಟೇ ಇದೇ 2016ರಲ್ಲಿ ಡಾಕಾದಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶ ನ್ಯಾಯಾಲಯವೊಂದು ಏಳು ಉಗ್ರರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಉಗ್ರರ ಗುಂಡಿನ ದಾಳಿಯಲ್ಲಿ 20 ಮಂದಿ ಮೃತಪಟ್ಟಿದ್ದರು. ಇವರಲ್ಲಿ ಹೆಚ್ಚಿನವರು ವಿದೇಶಿಯರಾಗಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 