ಶ್ರೀಶೈಲ ಶ್ರೀಗಳ ಆಶೀರ್ವಾದ ಪಡೆದ ಬಸವರಾಜ ಹಳಿಂಗಳಿ
Basavaraja Halingali received the blessings of Srisailam Sri
ಯಡೂರು 11: ಬೆಳಗಾವಿ ಜಿಲ್ಲಾ ಶಾಲಾಹಿಕಾಲೇಜುಗಳ ಅನುದಾನಿತ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಸವರಾಜ ಹಳಿಂಗಳಿ ಅವರು, ಯಡೂರಿನಲ್ಲಿ ನಡೆದ ಮಹಾಕುಂಭೋತ್ಸವದಲ್ಲಿ ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಶ್ರೀಗಳು ಮಾತನಾಡಿ, ಶಿಕ್ಷಕರ ಮತ್ತು ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿ ಎಂದು ಹಾರೈಸಿದರು. ಸಂಘದ ಮುಖಾಂತರ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸೇವೆ ಸಲ್ಲಿಸುವಂತೆ ಬಸವರಾಜ ಹಳಿಂಗಳಿ ಅವರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಹಿರಿಯರಾದ ಕಲ್ಲಪ್ಪಣ್ಣ ಗಾಣಿಗೇರ, ರಾಜು ರಾಚಣ್ಣವರ, ಪ್ರಕಾಶ ಗಿರಿಮಲ್ಲನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 