ವಾಹನ ಚಲಾಯಿಸುವಾಗ ಮುಂಜಾಗ್ರತೆ ವಹಿಸಿ -ವಿನೋದ ಮುಕ್ತೆದಾರ
Be careful while driving - enjoy yourself
ವಾಹನ ಚಲಾಯಿಸುವಾಗ ಮುಂಜಾಗ್ರತೆ ವಹಿಸಿ -ವಿನೋದ ಮುಕ್ತೆದಾರ
ಹುಬ್ಬಳ್ಳಿ 24: ಜನರು ವಾಹನ ಚಲಾಯಿಸುವಾಗ ಮುಂಜಾಗ್ರತೆ ವಹಿಸಬೇಕು ಎಂದು ಸಹಾಯಕ ಪೊಲೀಸ್ ಆಯುಕ್ತರಾದ ವಿನೋದ ಮುಕ್ತೆದಾರ ಹೇಳಿದರು.
ಇಂದು ಹೊಸೂರು ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇವುಗಳ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅವಸರವಾಗಿ ವಾಹನವನ್ನು ಚಲಾಯಿಸುವುರಿಂದ ಅಪಘಾತ ಸಂಭವಿಸುತ್ತವೆ. ಹೀಗಾಗಿ ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು. ವಾಹನಗಳಿಗೆ ವಿಮೆ ಮಾಡಿಸಬೇಕು. ಚಿಕ್ಕಮಕ್ಕಳಿಗೆ ಬೈಕ್, ಕಾರ್ ಗಳನ್ನು ಚಲಾಯಿಸಲು ಕೊಡಬಾರದು. ಸಂಚಾರ ನಿಯಮಗಳನ್ನು ತಪ್ಪದೇ ಅನುಸರಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.
ಶಾಲಾ ಕಾಲೇಜು ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ರಸ್ತೆ ಸುರಕ್ಷತಾ ಕರಪತ್ರಗಳನ್ನು ವಿತರಿಸಿ, ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ಎಂ. ರಾಮನಗೌಡರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ, ಹಿರಿಯ ಮೋಟಾರು ವಾಹನ ನೀರೀಕ್ಷರಾದ ಎಸ್.ಡಿ.ಬೆಲ್ಲದ್, ಅಧೀಕ್ಷಕರಾದ ಕೆ.ಎಂ.ಗೀತಾ, ನಿಂಗಪ್ಪ ಬಳ್ಳೂರು, ಪಿ.ವೈ.ಗಡೇದ, ವಿಜಯಕುಮಾರ್ ಕುಮಟಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 