ಕುಂಭಮೇಳದೊಂದಿಗೆ ಬೀರದೇವರ ಪಲ್ಲಕ್ಕಿ ಮೆರವಣಿಗೆ
ಮಾಂಜರಿ 06: ಯಕ್ಸಂಬಾ ಪಟ್ಟಣದ ಕರ್ಲಹೊಂಡಲಿಂಗೇಶ್ವರ ಯಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಬೀರದೇವರ ಪಲ್ಲಕ್ಕಿ ಮೆರವಣಿಗೆ ಮತ್ತು 111 ಸುಮಂಗಲೆಯರಿಂದ ಕುಂಭಮೇಳದ ಮೆರವಣಿಗೆ ಜರುಗಿತು.
ಗ್ರಾಮದ ಬೀರದೇವರ ಮಂದಿರದಲ್ಲಿ ಕುಂಭಮೇಳಕ್ಕೆ ಚಾಲನೆ ದೊರಕಿತು. ನಂತರ ಪಟ್ಠಣದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳದೊಂದಿಗೆ ಕುಂಭಮೇಳ ಜರುಗಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಂಭಮೇಳಕ್ಕೆ ಮೆರಗು ತಂದರು. ನಂತರ ಮೆರವಣಿಗೆಯು ಕರ್ಲಹೊಂಡಲಿಂಗೇಶ್ವರ ಮಂದಿರಕ್ಕೆ ತೆರಳಿ ಮಂಗಲಗೊಂಡಿತು. ನಂತರ ರುದ್ರಾಭಿಷೇಕ ಮತ್ತು ನೈವೆದ್ಯ ಕಾರ್ಯಕ್ರಮ ಜರುಗಿತು.
ಮಹೇಶ ಬಾಕಳೆ, ಮಲ್ಲಪ್ಪಾ ಗಿಡ್ಡ, ಮಹಾಂತೇಶ ಕಬಾಡೆ, ಮಲ್ಲಪ್ಪಾ ಕಬಾಡೆ, ಶ್ರವಣ ರಾಯಮಾನೆ, ಭಾಲಚಂದ್ರ ಸಪ್ತಸಾಗರೆ, ಅಜೀತ ನಾವಲಗೇರ, ರವಿ ಹಿಟಣೆ, ಪುಂಡಲಿಕ ಸಾತ್ವರ, ಅಂಕುಶ ಮಾಳಿ, ಮಹಾಂತೇಶ ವಸ್ತ್ರದ, ಭೀಮು ಬಾಕಳೆ, ರಾಹುಲ ನಾಯಿಕ, ನವೀನ ಹುನ್ನರಗಿ, ಸೇರಿದಂತೆ ಗ್ರಾಮಸ್ಥರು, ಅನ್ನದಾನ ಸಮೀತಿ ಹಾಗೂ ಯಾತ್ರಾ ಸಮಿತಿಯ ಸದಸ್ಯರು, ವಿವಿಧ ಯುವಕ ಮಂಡಳದ ಸದಸ್ಯರು, ಮಹೀಳೆಯರು ಪಲ್ಲಕ್ಕಿ ಮೆರವಣಿಗೆ ಮತ್ತು ಕುಂಭಮೇಳದಲ್ಲಿ ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 