ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
Beeralingeshwara Fair Festival
ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
ಸವಣೂರು 05: :ತಾಲೂಕಿನ ಹುರುಳಿಕುಪ್ಪಿ ಗ್ರಾಮದ ಶ್ರಾವಣ ಮಾಸದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.ವಿವಿಧ ಪೂಜೆ ಹಾಗೂ ಕರಿ ಕಟ್ಟುವುದು ಕಾರ್ಯಕ್ರಮ ನೆರವೇರಿತು ನಂತರ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಮೆರವಣಿಗೆ ಡೊಳ್ಳಿನ ಮೇಳ ಹಾಗೂ ಬಾಜಾ ಭಜಂತ್ರಿ ಮೇಳದವರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮದ ಹೊರವಲಯದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ತಲುಪಿತು. ಭಕ್ತಾದಿಗಳು ಬಂಡಾರ ಹಚ್ಚುವ ಮೂಲಕ ದೀಡ ನಮಸ್ಕಾರ ಹಾಕಿ ತಮ್ಮ ಹರಿಕೆಯನ್ನು ತೀರಿಸಿದರು. ಸ್ವಾಮಿಯ ವಿವಿಧ ಪೂಜೆ ಡೊಳ್ಳಿನ ಮೇಳ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಿದವು.ಸುತ್ತಮುತ್ತಲಿನ ಗ್ರಾಮದ ಭಕ್ತರು ಶ್ರೀಬೀರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಹೊನ್ನಪ್ಪ ಕೊಳ್ಳವರ,ಭರಮಪ್ಪ ಕಲಾದಗಿ, ಅಶೋಕ ಬಿಜ್ಜೂರ, ಫಕೀರಶ ಪೂಜಾರ,ಮಂಜು ಕೊಪ್ಪದ,ಏಕಪ್ಪ ಬಿಜ್ಜೂರ,ಪುಟ್ಟೇಶಶ ಕಳ್ಳಿಮನಿ,ಹನುಮಂತಪ್ಪ ವೈಯ್ಯಾಳಿ,ಉಡಚಪ್ಪ ಮಾನೇಗಾರ,ಗಣೇಶ ಕುಲಕರ್ಣಿ,ಮಂಜುನಾಥ ಪಿಳ್ಳಿ.ಹಾಗೂ ಗ್ರಾಮಸ್ಥರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 