ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
Beeralingeshwara Fair Festival
ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
ಸವಣೂರು 05: :ತಾಲೂಕಿನ ಹುರುಳಿಕುಪ್ಪಿ ಗ್ರಾಮದ ಶ್ರಾವಣ ಮಾಸದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.ವಿವಿಧ ಪೂಜೆ ಹಾಗೂ ಕರಿ ಕಟ್ಟುವುದು ಕಾರ್ಯಕ್ರಮ ನೆರವೇರಿತು ನಂತರ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಮೆರವಣಿಗೆ ಡೊಳ್ಳಿನ ಮೇಳ ಹಾಗೂ ಬಾಜಾ ಭಜಂತ್ರಿ ಮೇಳದವರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮದ ಹೊರವಲಯದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ತಲುಪಿತು. ಭಕ್ತಾದಿಗಳು ಬಂಡಾರ ಹಚ್ಚುವ ಮೂಲಕ ದೀಡ ನಮಸ್ಕಾರ ಹಾಕಿ ತಮ್ಮ ಹರಿಕೆಯನ್ನು ತೀರಿಸಿದರು. ಸ್ವಾಮಿಯ ವಿವಿಧ ಪೂಜೆ ಡೊಳ್ಳಿನ ಮೇಳ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಿದವು.ಸುತ್ತಮುತ್ತಲಿನ ಗ್ರಾಮದ ಭಕ್ತರು ಶ್ರೀಬೀರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಹೊನ್ನಪ್ಪ ಕೊಳ್ಳವರ,ಭರಮಪ್ಪ ಕಲಾದಗಿ, ಅಶೋಕ ಬಿಜ್ಜೂರ, ಫಕೀರಶ ಪೂಜಾರ,ಮಂಜು ಕೊಪ್ಪದ,ಏಕಪ್ಪ ಬಿಜ್ಜೂರ,ಪುಟ್ಟೇಶಶ ಕಳ್ಳಿಮನಿ,ಹನುಮಂತಪ್ಪ ವೈಯ್ಯಾಳಿ,ಉಡಚಪ್ಪ ಮಾನೇಗಾರ,ಗಣೇಶ ಕುಲಕರ್ಣಿ,ಮಂಜುನಾಥ ಪಿಳ್ಳಿ.ಹಾಗೂ ಗ್ರಾಮಸ್ಥರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 