ಬೀರ​‍್ಪ ಅಂಡಗಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರದಾನ

ಬೀರ​‍್ಪ ಅಂಡಗಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರದಾನ Beerpa Andagi awarded Swami Vivekananda Sadbhavana Award

ಕೊಪ್ಪಳ 01: ಪ್ರಾಥಮಿಕ ಶಾಲಾ ಶಿಕ್ಷಕರು,ವಿಕಲಚೇತನ ನೌಕರರ ಸಂಘಧ ರಾಜ್ಯಾಧ್ಯಕ್ಷರು ಹಾಗೂ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಬೀರ​‍್ಪ ಅಂಡಗಿ ಚಿಲವಾಡಗಿ ಅವರಿಗೆ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಸದ್ಭಾವನಾ ಪ್ರಶಸ್ತಿಯನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ವ್ಹಿ.ಬಿ.ಸಿ.ಪ್ರೌಢ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು. ಈ ಸಮಯದಲ್ಲಿ ಬಾಗಲಕೋಟ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷರಾದ ವೀಣಾ ಎಸ್ ಕಾಶಪ್ಪನವರ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವರಾದ ಶಂಕರಗೌಡ ಎಸ್ ಸೋಮನಾಳ,ಸಿದ್ದನಕೋಳದ ಡಾ.ಶಿವಕುಮಾರ ಮಹಾಸ್ವಾಮಿಗಳು,ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ, ಸಿದ್ದರಾಮೇಶ್ವರ ಸ್ವಾಮಿಗಳು,ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ.ಜಾನಪದ.ಎಸ್‌.ಬಾಲಾಜಿ,ಕಾರ್ಯದರ್ಶಿ ಸುರೇಶ ರೈ,ವಿಜಯಪುರ ಜಿಲ್ಲಾಧ್ಯಕ್ಷರಾದ ಪುಂಡಲೀಕ ಮುರಾಳ,ಅಹಿಳ್ಯಾ ದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಮದರಿ ಸೇರಿದಂತೆ ಅನೇಕರು ಹಾಜರಿದ್ದರು.ಪೋಟೊ: ಬೀರ​‍್ಪ ಅಂಡಗಿ ಅವರಿಗೆ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.-