ಬಳ್ಳಾರಿ: 15 ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ 08: ನಗರದ ಮುಂಡರಗಿ ಪ್ರದೇಶದ ವಿಜಯ ಹನುಮಾನ್ ಕೋಲ್ಡ್ ಸ್ಟೋರೆಜ್ ಹಾಗೂ ಖಾಜಾ ಗರೀಬ್ ಜಿನ್ನಿಂಗ್ನಲ್ಲಿ ದುಡಿಯುತ್ತಿದ್ದ 15 ಜನ ಬಾಲ ಕಾರ್ಮಿಕ ಮಕ್ಕಳನ್ನು ತಹಶೀಲ್ದಾರ್ ಯು.ನಾಗರಾಜ್ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆಯ ಚಂದ್ರಶೇಖರ್ ಐಲಿ ಹಾಗೂ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್ಪಿ ಜಾವೀದ್ ಇನಾಂದರ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.
ನಗರದ ಮುಂಡ್ರಿಗಿ ಪ್ರದೇಶದಲ್ಲಿರುವ ವಿಜಯ್ ಹನುಮಾನ್ ಕೋಲ್ಡ್ ಸ್ಟೋರೇಜ್ ಕೈಗಾರಿಕೆಯಲ್ಲಿ 7 ಮಕ್ಕಳು ಹಾಗೂ ಖಾಜಾ ಗರೀಬ್ನ ಮೇಣಸಿನಕಾಯಿ ಘಟಕದಲ್ಲಿ 5 ಜನ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಕಾಮರ್ಿಕ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಜಂಟಿ ಕಾಯರ್ಾಚರಣೆ ನಡೆಸಿ ಬಾಲ ಕಾಮರ್ಿಕರನ್ನು ರಕ್ಷಿಸಿದ್ದಾರೆ.
ಕಾರ್ಯಚರಣೆ ತಂಡದಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್ಪಿ ಜಾವೀದ್ ಇನಾಂದರ್, ಬಾಲಕಾಮರ್ಿಕ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ನಿರೀಕ್ಷಕರಾದ ರವಿದಾಸ್, ರಾಜೇಶ್, ಕ್ಷೇತ್ರಾಧಿಕಾರಿ ಈಶ್ವರಯ್ಯ, ದುರುಗೇಶ್ ಮಾಚನೂರು, ಭೋಜರಾಜು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 