ಬಳ್ಳಾರಿ: ಆದಿವಾಸಿಗಳ ಬರವಣಿಗೆ, ಧ್ವನಿ: ಅಂತರಾಷ್ಟ್ರೀಯ ಸಮ್ಮೇಳನ
ಲೋಕದರ್ಶನ ವರದಿ
ಬಳ್ಳಾರಿ 04: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ದಿ: 3 ಮತ್ತು 4ಜೂನ್ 2019 ರಂದು ಆದಿವಾಸಿಗಳ ಬರವಣಿಗೆ ಮತ್ತು ನಿರ್ಬಂಧಿತ ಧ್ವನಿ ಈ ವಿಷಯದ ಕುರಿತು ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಜರುಗಿತು. ಉದ್ಘಾಟನೆ ಮಾಡಿ ಮಾತನಾಡಿದ ಡಾ. ಸುರಜ್ ಬಡ್ತ್ಯ ನಾಗರಿಕ ಸಮಾಜ ಆದಿವಾಸಿ ಜನರಿಗೆ ಅನ್ಯಾಯ ಮಾಡಿದೆ, ಆದಿವಾಸಿಗಳು ಕೇವಲ ಭೂಮಿ, ನೀರು, ಕಾಡು ಇವುಗಳ ನಡುವೆ ಕಳೆದು ಹೋಗಿದ್ದಾರೆ. ಮೂಲಭೂತ ಹಕ್ಕುಗಳ ಕುರಿತು ಜ್ಞಾನವನ್ನು ಹೊಂದದಿರುವುದೇ ಇದಕ್ಕೆ ಮುಖ್ಯ ಕಾರಣ ಎಂದರು.
ಮುಖ್ಯ ಅಥಿತಿ ಮಾತುಗಳಾನ್ನಾಡಿದ ಪ್ರೊ. ರಮೇಶ್ ಆದಿವಾಸಿಗಳು ಬದುಕನ್ನು ಕಟ್ಟಿಕೊಳ್ಳುವುದು ಇವತ್ತಿನ ಅನಿವಾರ್ಯತೆಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕುಲಪತಿ ಎಂ.ಎಸ್. ಸುಭಾಸ್ ಆದಿವಾಸಿ ಜೀವನ ಒಂದು ನಿಗೂಢ ಪ್ರಶ್ನೆಯಾಗಿದೆ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರೊ. ಎನ್. ಶಾಂತನಾಯ್ಕ್ ವಿಚಾರ ಗೋಷ್ಠಿಯ ಮೂಲ ಆಶಯವನ್ನು ಪ್ರಸ್ತುತ ಪಡಿಸುತ್ತಾ ಆದಿವಾಸಿಗಳು ಬದುಕಿರುವ ಬದುಕು ಅವರದಲ್ಲಾ, ಇದು ನಾಗರಿಕ ಸಮಾಜ ಹೇರಿರುವ ಒತ್ತಡ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಮೂಲ ಭಾಷಣ ಮಾಡಿದ ಬಾಬುರಾವ್ ಹರಿಶ್ರೀ, ಭೂತನ್ ರಾಯಲ್ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕ ಮಾತನಾಡಿ ಪಾಶ್ಚತ್ತೋತ್ತರ ಭಾರತದಲ್ಲಿ ಆದಿವಾಸಿಗಳು ಎಲ್ಲಾ ಮೂಲ ನೆಲೆಗಳನ್ನು ಕಳೆದುಕೊಂಡು ದಿಕ್ಕಿಲ್ಲದಂತೆ ಆಗಿದ್ದಾರೆ ಎಂದರು.
ಕಾರ್ಯಕ್ರಮವು ರಾಹುಲ್ ನಾಗಪ್ಪ ತಂಡದವರ ಉರುಮಿಯೊಂದಿಗೆ ಆರಂಭವಾಗಿದ್ದು ವಿಶಿಷ್ಟ. ಕಾರ್ಯಕ್ರಮದಲ್ಲಿ ಹೈದರಾಬಾದಿನ ಡಾ.ರಾಜುನಾಯ್ಕ್, ಡಾ.ವಿಜಯ, ಮುತಾಂದ ಅನೇಕ ಸಂಶೋಧಕರು ಹಾಜರಾಗಿದ್ದರು. ಮಾನಸ.ಕೆ ಪ್ರಾರ್ಥನೆ ಮಾಡಿದರು ಫರಾನಾಜ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 