ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಧನ: ಪರಿಹಾರ ವಿತರಣೆ
ಲೋಕದರ್ಶನ ವರದಿ
ಬಳ್ಳಾರಿ 19: ಲೋಕಸಭಾ ಚುನಾವಣಾ-2019ರಲ್ಲಿ ಕರ್ತವ್ಯನಿರತರಾಗಿದ್ದ ಸಂದರ್ಭದಲ್ಲಿ ನಿಧನ ಹೊಂದಿದ 3 ಜನ ನೌಕರರ ಕುಟುಂಬದ ವಾರಸುದಾರರಿಗೆ ಪ್ರಭಾರ ಜಿಲ್ಲಾಧಿಕಾರಿ ಕೆ.ನಿತೀಶ್ ಅವರು ಪರಿಹಾರಧನ ವಿತರಿಸಿದರು.
ಸಿರಗುಪ್ಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಿ.ರಮೇಶ ಗುರುಸಿದ್ದಪ್ಪ ನಿಧನರಾದ ಪ್ರಯುಕ್ತ ಸದರಿಯವರ ಪತ್ನಿ ಬಿ.ಮಂಜುಳಾ ಅವರಿಗೆ 15ಲಕ್ಷ ರೂ.ಗಳ ಪರಿಹಾರಧನವನ್ನು ಪ್ರಭಾರ ಜಿಲ್ಲಾಧಿಕಾರಿಗಳಾದ ಜಿಪಂ ಸಿಇಒ ಕೆ.ನಿತೀಶ್ ಅವರು ವಿತರಿಸಿದರು.
ಗುಡೇಕೋಟೆ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಎಚ್.ದೇವಿಂದ್ರಪ್ಪ ಅವರು ಚುನಾವಣಾ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ಹಿನ್ನೆಲೆ ಅವರ ವಾರಸುದಾರರಾದ ಪತ್ನಿ ಚನ್ನಮ್ಮ ತಿಮ್ಮನಹಳ್ಳಿ ಅವರಿಗೆ 10 ಲಕ್ಷ ರೂ.ಪರಿಹಾರ ಧನವನ್ನು ವಿತರಿಸಲಾಯಿತು.
ಚುನಾವಣಾ ಸಂದರ್ಭದಲ್ಲಿದ್ದಾಗಲೇ ನಿಧನರಾದ ಕಲ್ಲಹಳ್ಳಿ ಗ್ರಾಪಂ ಪಿಡಿಒ ವೆಂಕಟಲಕ್ಷ್ಮೀ ಅವರ ವಾರಸುದಾರರಾದ ಪತಿ ಜೆ.ಬಸವರಾಜು ಮತ್ತು ಮಕ್ಕಳಿಗೆ ರೂ.15ಲಕ್ಷಗಳ ಪರಿಹಾರ ಧನವನ್ನು ಪ್ರಭಾರ ಜಿಲ್ಲಾಧಿಕಾರಿಗಳು ವಿತರಿಸಿದರು. ಇದೇ ಸಂದರ್ಭದಲ್ಲಿ ಸಾಂತ್ವಾನ ಸಹ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 