ಬಳ್ಳಾರಿ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ
ಲೋಕದರ್ಶನ ವರದಿ
ಬಳ್ಳಾರಿ 03: ಮಹಿಳೆಯರು ಸ್ವಾವಲಂಬನೆಯಾಗಲು ಟೈಲರಿಂಗ್ ಸಹಾಯವಾಗುವುದು ಎಂದು ಹಾಗೂ ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು, ನೀವು ಗಳಿಸಿದ ಹಣವನ್ನು ಮಕ್ಕಳ ವಿದ್ಯಾಭ್ಯಾಸ ಮತ್ತು ಆರೋಗ್ಯಕ್ಕೆ ಮೀಸಲಿಡಬೇಕೆಂದು ಹಾಗೂ ಮಹಿಳೆಯರು ವಿದ್ಯೆ ಕಲಿತರೆ ಕುಟುಂಬ ಉದ್ದಾರವಾಗುವುದು ಎಂದು ಕಲ್ಯಾಣ ಮಹಾಸ್ವಾಮಿಗಳವರು ಇಂದು ಕೌಲ್ಬಜಾರ್ನ ಮಹಾನಗರ ಪಾಲಿಕೆ ಸದಸ್ಯರಾದ ಗೋವಿಂದರಾಜುಲು ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ 90 ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಲು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಹಾಗೂ ಗೋವಿಂದರಾಜುಲು ಅವರು ಪಾಲಿಕೆಯ ಸದಸ್ಯರಾದ ಅಂದಿನಿಂದಲೂ ಇಂದಿನವರೆಗೆ 3 ತಿಂಗಳಿಗೊಮ್ಮೆ ಬಡವರ ಉದ್ಧಾರಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು, ಅವರಿಗೆ ಭಗವಂತ ಆಯುರಾರೋಗ್ಯ ಭಾಗ್ಯ ನೀಡಲಿ ಎಂದು ಶುಭ ಹಾರೈಸಿದರು.
ಮಾಜಿ ಸಂಸದರಾದ ಫಕ್ಕೀರಪ್ಪನವರು ಮಾತನಾಡಿ, ಬಳ್ಳಾರಿ ನಗರದ 35 ವಾಡರ್ುಗಳಲ್ಲಿ ಇಂತಹ ಸಮಾಜ ಸೇವೆ ಮಾಡುವ ಸದಸ್ಯರು ಸಿಗುವುದಿಲ್ಲವೆಂದು, ಮುಂದಿನ ಚುನಾವಣೆಯಲ್ಲೂ ಇವರನ್ನೇ ಆಯ್ಕೆ ಮಾಡಬೇಕೆಂದು ಆಶಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋವಿಂದರಾಜುಲು ಅವರು, ಗುರುಗಳು ಮತ್ತು ಹಿತೈಷಿಗಳು ನಾವು ನಂಬಿದ ಎಲ್ಲಾ ಮುಖಂಡರುಗಳ ಆಶೀವರ್ಾದದಿಂದ ನಾವು ಈ ಕಾರ್ಯಕ್ರಮವನ್ನು ನೆರವೇರಿಸುತ್ತಿದ್ದೇವೆ ಎಂದು, ಇದರ ಸದುಪಯೋಗಪಡಿಸಿಕೊಂಡು ಎಲ್ಲಾ ನಾಗರಿಕರ ಜೀವನ ಸುಗಮವಾಗಬೇಕೆಂದು ಆಶಿಸಿದರು.
ಈ ಸಂದರ್ಭದಲ್ಲಿ ಓಬಳೇಶ್, ನೂರ್ ಅಹ್ಮದ್, ಶೀನ ಹಾಗೂ ನೂರಾರು ಕೌಲ್ಬಜಾರ್ನ ಕಾರ್ಯಕರ್ತರು ಗೋವಿಂದರಾಜುಲು ಅವರ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಎಲ್ಲರಿಗೂ ಸಿಹಿ ಹಂಚಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 