ಬಳ್ಳಾರಿ: ಉಚಿತ ಕಣ್ಣಿನ ತಪಾಸಣೆ ಶಸ್ತ್ರ ಚಿಕಿತ್ಸೆ
ಬಳ್ಳಾರಿ 25: ನಗರದ 24ನೇ ವಾರ್ಡನ ಕಾರ್ಪೊರೇಟರ್ ಎಂ.ಗೋವಿಂದರಾಜುಲು ಏರ್ಪಡಿಸಿದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಕೌಲ್ಬಜಾರ್ನ ಟೈಲರ್ ಬೀದಿಯಲ್ಲಿರುವ ಬಿಜೆಪಿ ಕಛೇರಿಯಲ್ಲಿ ಮಾಜಿ ಸಚಿವ ಜಿ.ಜನಾರ್ಧನರೆಡ್ಡಿ ಹಾಗೂ ಸೋಮಶೇಖರರೆಡ್ಡಿ, ಕಲ್ಯಾಣಸ್ವಾಮಿ, ಬಿಷಫ್, ಮೃತ್ಯುಂಜಯ ಖಾನ್ ಸಾಬ್ ಅವರು ಉದ್ಘಾಟಿಸಿದರು.
600 ಜನರಿಗೆ ತಪಾಸಣೆ ಮಾಡಿ ಅವರಲ್ಲಿ 110 ಜನರಿಗೆ ಉಚಿತವಾಗಿ ಕನ್ನಡಕವನ್ನು ನೀಡಿದ್ದರು. 127 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಡಾ.ನಾಗರಾಜ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ನೆರವೇರಿಸಿದರು. ಅವರಿಗೆ ಕಲರ್ ಕನ್ನಡಕವನ್ನು ನೀಡಿ ಬರುವ ಜುಲೈ 21ರಂದು ಕಣ್ಣಿನ ತಪಾಸಣೆ ಮಾಡಿ ಕನ್ನಡಕವನ್ನು ನೀಡುವುದಾಗಿ ಗೋವಿಂದರಾಜುಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ರಾಜಶೇಖರರೆಡ್ಡಿ, ಡಾ.ವಿಜಯ್, ಮಾರೆಣ್ಣ ಹಾಗೂ ಇತರರು ಉಪಸ್ಥಿತರಿದ್ದರು. ಗೋವಿಂದರಾಜುಲು ಎಲ್ಲರಿಗೆ ಸನ್ಮಾನಿಸಿದರು. ಗೋವಿಂದರಾಜುಲು ಇಲ್ಲಿಯವರೆಗೆ 12 ರಕ್ತದಾನ ಶಿಬಿರಗಳನ್ನು, ಒಂದು ಹೃದಯ ಚಿಕಿತ್ಸೆ ಶಿಬಿರವನ್ನು ಏರ್ಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 