ಬಳ್ಳಾರಿ: ಉಚಿತ ಕಣ್ಣಿನ ತಪಾಸಣೆ ಶಸ್ತ್ರ ಚಿಕಿತ್ಸೆ
ಬಳ್ಳಾರಿ 25: ನಗರದ 24ನೇ ವಾರ್ಡನ ಕಾರ್ಪೊರೇಟರ್ ಎಂ.ಗೋವಿಂದರಾಜುಲು ಏರ್ಪಡಿಸಿದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಕೌಲ್ಬಜಾರ್ನ ಟೈಲರ್ ಬೀದಿಯಲ್ಲಿರುವ ಬಿಜೆಪಿ ಕಛೇರಿಯಲ್ಲಿ ಮಾಜಿ ಸಚಿವ ಜಿ.ಜನಾರ್ಧನರೆಡ್ಡಿ ಹಾಗೂ ಸೋಮಶೇಖರರೆಡ್ಡಿ, ಕಲ್ಯಾಣಸ್ವಾಮಿ, ಬಿಷಫ್, ಮೃತ್ಯುಂಜಯ ಖಾನ್ ಸಾಬ್ ಅವರು ಉದ್ಘಾಟಿಸಿದರು.
600 ಜನರಿಗೆ ತಪಾಸಣೆ ಮಾಡಿ ಅವರಲ್ಲಿ 110 ಜನರಿಗೆ ಉಚಿತವಾಗಿ ಕನ್ನಡಕವನ್ನು ನೀಡಿದ್ದರು. 127 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಡಾ.ನಾಗರಾಜ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ನೆರವೇರಿಸಿದರು. ಅವರಿಗೆ ಕಲರ್ ಕನ್ನಡಕವನ್ನು ನೀಡಿ ಬರುವ ಜುಲೈ 21ರಂದು ಕಣ್ಣಿನ ತಪಾಸಣೆ ಮಾಡಿ ಕನ್ನಡಕವನ್ನು ನೀಡುವುದಾಗಿ ಗೋವಿಂದರಾಜುಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ರಾಜಶೇಖರರೆಡ್ಡಿ, ಡಾ.ವಿಜಯ್, ಮಾರೆಣ್ಣ ಹಾಗೂ ಇತರರು ಉಪಸ್ಥಿತರಿದ್ದರು. ಗೋವಿಂದರಾಜುಲು ಎಲ್ಲರಿಗೆ ಸನ್ಮಾನಿಸಿದರು. ಗೋವಿಂದರಾಜುಲು ಇಲ್ಲಿಯವರೆಗೆ 12 ರಕ್ತದಾನ ಶಿಬಿರಗಳನ್ನು, ಒಂದು ಹೃದಯ ಚಿಕಿತ್ಸೆ ಶಿಬಿರವನ್ನು ಏರ್ಪಡಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 