ಬಳ್ಳಾರಿ: ಜಿಂದಾಲ್ ಕಂಪನಿಗೆ ಜಮಿನು ಮಾರಾಟ ಖಂಡಿಸಿ ಮನವಿ
ಲೋಕದರ್ಶನ ವರದಿ
ಬಳ್ಳಾರಿ 26: ಜಿಲ್ಲೆಯ ತೋರಣಗಲ್ಲು ಜೆ.ಎಸ್.ಡಬ್ಲ್ಯೂ.ನ ಜಿಂದಾಲ್ ಉಕ್ಕು ಕಾರ್ಖಾನೆಗೆ ಅತಿ ಕಡಿಮೆ ಬೆಲೆಗೆ ಮಾರಾಟ ಕ್ರಯಪತ್ರದ ಮೂಲಕ ಸುಮಾರು 3667 ಎಕರೆ ಭೂಮಿಯನ್ನು ರಾಜ್ಯ ಸರಕಾರ ನೀಡಿರುವುದು ಖಂಡನೀಯ ಅದರಲ್ಲೂ ದೇಶದ ಅತಿ ದೊಡ್ಡ ಉಕ್ಕು ಕಾಖರ್ಾನೆ ವಾರ್ಷಿಕ ವಹಿವಾಟು ಬಹುಕೋಟಿ ಆಗಿರುವಂತಹ ಜಿಂದಾಲ್ ಕಂಪನಿ ಇಷ್ಟು ಕಡಿಮೆ ಬೆಲೆಯಲ್ಲಿ ಜಮೀನು ನೀಡಿರುವುದು ಸಕರ್ಾರದ ಬೊಕ್ಕಸಕ್ಕೆ ವಂಚನೆ ಆದಕಾರಣ ಈ ಕೂಡಲೇ ರಾಜ್ಯ ಸರ್ಕಾರ ಜಮೀನನ್ನು ಹಿಂಪಡೆಯಬೇಕು ಮತ್ತು ಜಿಲ್ಲಾ, ರಾಜ್ಯ ಸ್ಥಳೀಯರಿಗೆ ಉದ್ಯೋಗವಕಾಶವನ್ನು ಕೊಡಬೇಕು ಇಲ್ಲವಾದರೆ ರಾಜ್ಯ ಪ್ರತಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವಿ.ರಾಮಾಂಜಿನೇಯ, ನಗರಾಧ್ಯಕ್ಷರಾದ ಬಿ.ಚಂದ್ರಶೇಖರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ವಿ.ಕೆ.ರಾಜ, ಜಿಲ್ಲಾ ಪ್ರದಾನಕಾರ್ಯದರ್ಶಿಗಳು , ಬಿ.ಪಾರ್ವತಿ, ಜಿಲ್ಲಾ ಉಪಾದ್ಯಕ್ಷರಾದ ಬಿ.ಆರ್.ಎಲ್.ಸಿನಾ, ಬಳ್ಳಾರಿ ತಾಲೂಕು ಅಧ್ಯಕ್ಷರಾದ ಕರುಣಾಕರರೆಡ್ಡಿ, ಬಳ್ಳಾರಿ ಜಿಲ್ಲಾ ರೈತ ಸಂಘ ಅಧ್ಯಕ್ಷರಾದ ಹುಲಿಗೇಶ್, ನಗರ ಉಪಾದ್ಯಕ್ಷರಾದ ಅಸುಂಡಿ ಸೂರಿ ಹಾಗೂ ಕ.ರವೇ ಸದಸ್ಯರುಗಳು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 