ಬಳ್ಳಾರಿ: ಬೋಧಕ ಹುದ್ದೆಗಳ ತನಿಖೆ ಒತ್ತಾಯಿಸಿ ಮನವಿ
ಲೋಕದರ್ಶನ ವರದಿ
ಬಳ್ಳಾರಿ 19: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭದಿಂದಲೂ ತುಂಬಾ ಗೊಂದಲಗಳಿಂದ ಕೂಡಿರುವುದು, ಸಾರ್ವಜನಿಕ ವಲಯದಿಂದ ಕೇಳಿ ಬಂದಿರುತ್ತದೆ. ಈಗಾಗಲೇ ಪ್ರೊ.ಸುಭಾಷ್ರವರು ಬೋಧಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಗಿಸಿದ್ದಾರೆ.
ಈ ನೇಮಕಾತಿಯಲ್ಲಿ ಭ್ರಷ್ಟಾಚಾರವಾಗಿರುವುದು, ರೋಸ್ಟರ್ ಪದ್ಧತಿ ಉಲ್ಲಂಘನೆಯಾಗಿರುವುದು, ಘನ ಸಹಾಯ ಆಯೋಗದ ನೀತಿ ನಿಯಮಗಳು ಉಲ್ಲಂಘನೆಯಾಗಿರುವುದು ಕಂಡುಬಂದಿದ್ದು, ಸಾರ್ವಜನಿಕ ವಲಯದಲ್ಲಿ ಗೊಂದಲಗಳು ಸೃಷ್ಟಿಯಾಗಿವೆ ಆದ್ದರಿಂದ ವ್ಯಾಪಕವಾದ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಘನವೆತ್ತ ನಿವೃತ್ತ ನ್ಯಾಯಾಧೀಶರಿಂದ ತನಿಖಾ ಸಮಿತಿ ರಚಿಸಿ ತನಿಖೆಗೆ ಒಳಪಡಿಸಬೇಕೆಂದು ಕುಲಪತಿಗಳು ಸರ್ಕಾರಕ್ಕೆ ಆಗ್ರಹಪಡಿಸಬೇಕು.
ಹಾಗೆಯೇ ಬೋಧಕೇತರ ಹುದ್ದೆಗಳ ನೇಮಕಾತಿಯಲ್ಲಿ ಪ್ರವೇಶ ಪತ್ರ ವಿಳಂಬ ಮತ್ತು ಪ್ರಶ್ನೆ ಪತ್ರಿಕೆಯಲ್ಲಿ ತುಂಬಾ ಗೊಂದಲಗಳಿರುವುದು ಹಾಗೂ ಸಾರ್ವಜನಿಕ ವಲಯದಲ್ಲಿ ತುಂಬಾ ಅಪಸ್ವರದ ಮಾತುಗಳು ಕೇಳಿ ಬಂದಿರುತ್ತವೆ. ಕೂಡಲೇ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಮರು ಪರೀಕ್ಷೆ ಪ್ರಕ್ರಿಯೆಯನ್ನು ಕುಲಪತಿಗಳು ಮಾಡಬೇಕೆಂದು ತಮ್ಮಲ್ಲಿ ಮನವಿ. ಇದೇ ಪ್ರಕ್ರಿಯೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆಯನ್ನು ಮಾಡಬೇಕಾಗುತ್ತದೆ ಎಂದು ಎ.ಬಿ.ವಿ.ಪಿ. ಆಗ್ರಹಿಸುತ್ತದೆ. ಬೋದಕೇತರ ಹುದ್ದೆಗೆ ನಡೆಸಿದ ಪ್ರಶ್ನೆ ಪತ್ರಿಕೆಯ ಪ್ರತಿಗಳನ್ನು ಲಗತ್ತಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದಶರ್ಿ ಯುವರಾಜ, ರಾಜ್ಯ ಕಾರ್ಯಕಾರಣಿ ಸದಸ್ಯ ಕೌಶಿಕ್, ಹೇಮರೆಡ್ಡಿ, ರುದ್ರಪ್ಪ, ವಿಶ್ವವಿದ್ಯಾಲಯ ಹೋರಾಟ ಸಮಿತಿಯ ಅಡವಿಸ್ವಾಮಿ, ಮಲ್ಲೇಶ್ ಕುಮಾರ್ ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 