ಬಳ್ಳಾರಿ: ವ್ಯಾಸರಾಜ ಬೃಂದಾವನ ಮರು ನಿರ್ಮಾಣ ಪ್ರತಿಷ್ಟಾಪನೆ
ಲೋಕದರ್ಶನ ವರದಿ
ಬಳ್ಳಾರಿ 19: ಹಂಪಿಯ ಬಳಿ ಇರುವ ಆನೆಗುಂದಿಯ ನವ ಬೃಂದಾವನ ಗಡ್ಡೆಯಲ್ಲಿ ಶ್ರೀ ವ್ಯಾಸರಾಜ ತೀರ್ಥರ ಮೂಲ ಬೃಂದಾವನ ಪುನರ್ ನಿರ್ಮಾಣ ಕಾರ್ಯ ತಡರಾತ್ರಿಯಿಂದಲೇ ಆರಂಭವಾಗಿದೆ.
ನವ ಬೃಂದಾವನದ ಗಡ್ಡೆಯಲ್ಲಿದ್ದ ವ್ಯಾಸರಾಜ ತೀರ್ಥರ ಬೃಂದಾವನ ಅದೇ ಸ್ಥಳದಲ್ಲಿಯೇ ಮರು ನಿರ್ಮಾಣ ಕಾರ್ಯವಾಗಿದೆ. ವ್ಯಾಸರಾಜ ಮಠ. ರಾಯರ ಮಠ, ಉತ್ತರಾಧಿ ಮಠ, ವಾದಿರಾಜರ ಮಠ, ಮಾದವ ತೀರ್ಥ ಮಠ ಸ್ವಾಮಿಜೀಗಳ ನೇತೃತ್ವದಲ್ಲಿ ವ್ಯಾಸರಾಜ ತೀರ್ಥರ ಬೃಂದಾವನ ಮರು ನಿರ್ಮಾಣವಾಗಿದೆ.
ಈ ಹಿಂದೆ ಇದ್ದ ಮಾದರಿಯಲ್ಲಿಯೇ ನಿರ್ಮಾಣ ಮಾಡಿದ್ದು ತಜ್ಞ ಶಿಲ್ಪಿಗಳು ಅವಶೇಷಗಳನ್ನು ಸಂಗ್ರಹಿಸಿದ್ದಾರೆ. ಮರು ನಿರ್ಮಾಣಕ್ಕೆ ಬಳಕೆಗೆ ಬರಬಹುದಾದ ಕಲ್ಲುಗಳನ್ನು ಬಳಸಿದ್ದಾರೆ. ಉಳಿದಿರುವುದನ್ನು ಹೊಸದಾಗಿ ಕೆತ್ತನೆ ಮಾಡಬೇಕಾ.. ಅಥವಾ ಇರುವುದರಲ್ಲಿಯೇ ಬಳಸಿಕೊಂಡು ಮರು ಜೋಡಣೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದರು. ಸದ್ಯ ನಡುಗಡ್ಡೆಯಲ್ಲಿ ಮೂಲಕ ಬೃಂದಾವನ ಸ್ಥಳದಲ್ಲಿಯೇ ಪಾಣಿಪೀಠವನ್ನು ಸಿದ್ದಪಡಿಸಿಲಾಗಿದೆ. ಬೃಂದಾವನದ ಮೆಲ್ಭಾಗವನ್ನು ಪೂರ್ಣಗೊಳಿಸಿ ಬೃಂದಾವನ ಮರು ನಿರ್ಮಾಣದ ಬಳಿಕವೇ ಪುನರ್ ಪ್ರತಿಷ್ಟಾಪನೆ ಕಾರ್ಯ ಸೇರಿದಂತೆ ಇತರ ದಾರ್ಮಿಕ ಕಾರ್ಯಕ್ರಮಗಳು ನಡೆದಿವೆ ಎಂದು ಮಠದ ಮೂಲಗಳು ತಿಳಿಸಿವೆ.
ನಡುಗಡ್ಡೆಗೆ ಗುರುವಾರ ರಾತ್ರಿಪೇಜಾವರ ಮಠದ ಶ್ರೀಗಳು, ಶ್ರೀಪಾದ ರಾಜರಮಠದ ಶ್ರೀಗಳು, ಸೇರಿದಂತೆ ನಾನಾ ಮಠದ ಪೀಠಾದಿಪತಿಗಳು ಆಗಮಿಸಿದ್ದು. ನಡೆದ ಎಲ್ಲಾ ಗಟನೆಯನ್ನು ನೋಡಿ ಪುನರ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು. ನಿರ್ಮಾಣಕ್ಕೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ನಾನಾ ಕಡೆಗಳಿಂದ ಭಕ್ತರು ಆಗಮಸುತ್ತಿದ್ದಾರೆ. ಸ್ಥಳದಲ್ಲಿ ಸೂಕ್ತ ಪೋಲಿಸ್ ಬಂದೊಬಸ್ತ್ ಕೈಗೊಳ್ಳಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 