ಬಳ್ಳಾರಿ ಜಿಲ್ಲಾ ಜೆಡಿಎಸ್ 76ನೇ ಗಣರಾಜ್ಯೋತ್ಸವ ಆಚರಣೆ
Bellary District JDS 76th Republic Day Celebration
ಬಳ್ಳಾರಿ ಜಿಲ್ಲಾ ಜೆಡಿಎಸ್ 76ನೇ ಗಣರಾಜ್ಯೋತ್ಸವ ಆಚರಣೆ
ಬಳ್ಳಾರಿ 26:ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣವವನ್ನು ನೆರವೇರಿಸಿದರು.
ಬಳ್ಳಾರಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಮಾತನಾಡಿ ದೇಶದಲ್ಲಿ ಸಂವಿಧಾನ ಜಾರಿಯಾದ ದಿನ ಇದಾಗಿದ್ದು, ಬಲಿಷ್ಠ ಮತ್ತು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ಭಾರತ ದೇಶದ್ದಾಗಿದೆ ಎಂದರು. ಭಾರತ ಸಂವಿಧಾನವು 1949ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂತು. ಪ್ರತಿ ವರ್ಷ ಜನವರಿ 26 ರಂದು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಲೋಕತಾಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಭಾರತ ದೇಶವು ಸಂವಿಧಾನ ಜಾರಿಗೆ ಬಂದ ದಿನವನ್ನು ಸ್ಮರಿಸುತ್ತೇವೆ ಎಂದು ಗಣರಾಜ್ಯೋತ್ಸವ’ದ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ರಾಮಾಂಜನೇಯ, ಮಧುರೈ ವಿಜಯ್ ಕುಮಾರ್, ಬಸಪ್ಪ, ಅಶೋಕ ಸಂಗನಕಲ್ಲು, ಕಿರಣ್ ಕುಮಾರ್, ರುದ್ರಮುನಿ ಮುತ್ತು, ಪ್ರದೀಪ್, ಜಾವೀದ್, ಹೊನ್ನೂರು ವಲಿ, ಜಮೀಲಾ, ಪುಷ್ಪ, ರೇಣುಕಾ, ಯಶೋಧ, ಮತ್ತು ಶಬಾನಾ ಮತ್ತು ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 