ನೂತನ ಅಧ್ಯಕ್ಷರಾಗಿ ಬೆಳ್ಳೆಟ್ಟೆರ ಅವಿರೋಧ ಆಯ್ಕೆ
Bellette elected unopposed as new president
ಹಾವೇರಿ 12 : ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಹಾವೇರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಹಿರೇಕೆರೂರಿನ ಡಾ. ಬಿ. ಆರ್. ತಂಬಾಕದ ಬಾಲಕರ ಪ್ರೌಢಶಾಲೆಯ ಶಿಕ್ಷಕ ಡಾ. ರಾಜೇಂದ್ರ ಬೆಳ್ಳೆಟ್ಟೆರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಎಚ್. ಪಿ. ಬಣಕಾರ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಜಿಲ್ಲಾ ಗುರುಭವನದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಾಜೇಂದ್ರ ಬೆಟ್ಟೆಳ್ಳೇರ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯ ಘಟಕದ ಜಿ. ಆರ್. ಭಟ್, ಮತ್ತಿತರರು ಶುಭ ಹಾರೈಸಿದ್ದಾರೆ. ಸಭೆಯಲ್ಲಿ ಎಚ್. ಪಿ. ಬಣಕಾರ, ಕಾರ್ಯದರ್ಶಿ ಎನ್. ಎನ್. ಕುಂದೂರು, ಹಾವೇರಿ ತಾಲೂಕು ಅಧ್ಯಕ್ಷ ಎಂ. ಬಿ. ರಮೇಶ, ಡಿ. ಡಿ. ಲಂಗೋಟಿ, ಕುಮಾರ ಗಾಣಗೇರ, ಎಸ್. ಡಿ. ಪರಡ್ಡಿ, ಬಸವರಾಜ ಜೆ. ಎ. ಎಂ. ಎಚ್. ಪಾಟೀಲ, ಗಣೇಶ ಬೆಳಕೇರಿ, ರವಿ ವಿ. ಎಸ್. ವಿ. ಕಪ್ಪರದ, ಎಸ್. ಎನ್. ಮಳೆಪ್ಪನವರ, ಮತ್ತಿತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 