ನೂತನ ಅಧ್ಯಕ್ಷರಾಗಿ ಬೆಳ್ಳೆಟ್ಟೆರ ಅವಿರೋಧ ಆಯ್ಕೆ
Bellette elected unopposed as new president
ಹಾವೇರಿ 12 : ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಹಾವೇರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಹಿರೇಕೆರೂರಿನ ಡಾ. ಬಿ. ಆರ್. ತಂಬಾಕದ ಬಾಲಕರ ಪ್ರೌಢಶಾಲೆಯ ಶಿಕ್ಷಕ ಡಾ. ರಾಜೇಂದ್ರ ಬೆಳ್ಳೆಟ್ಟೆರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಎಚ್. ಪಿ. ಬಣಕಾರ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಜಿಲ್ಲಾ ಗುರುಭವನದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಾಜೇಂದ್ರ ಬೆಟ್ಟೆಳ್ಳೇರ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯ ಘಟಕದ ಜಿ. ಆರ್. ಭಟ್, ಮತ್ತಿತರರು ಶುಭ ಹಾರೈಸಿದ್ದಾರೆ. ಸಭೆಯಲ್ಲಿ ಎಚ್. ಪಿ. ಬಣಕಾರ, ಕಾರ್ಯದರ್ಶಿ ಎನ್. ಎನ್. ಕುಂದೂರು, ಹಾವೇರಿ ತಾಲೂಕು ಅಧ್ಯಕ್ಷ ಎಂ. ಬಿ. ರಮೇಶ, ಡಿ. ಡಿ. ಲಂಗೋಟಿ, ಕುಮಾರ ಗಾಣಗೇರ, ಎಸ್. ಡಿ. ಪರಡ್ಡಿ, ಬಸವರಾಜ ಜೆ. ಎ. ಎಂ. ಎಚ್. ಪಾಟೀಲ, ಗಣೇಶ ಬೆಳಕೇರಿ, ರವಿ ವಿ. ಎಸ್. ವಿ. ಕಪ್ಪರದ, ಎಸ್. ಎನ್. ಮಳೆಪ್ಪನವರ, ಮತ್ತಿತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 