ಅಕ್ಕೋಳ ಸರಕಾರಿ ಶಾಲೆಯ ಎರಡು ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ
Bhoomi Puja for the construction of two rooms of Akola Government School
ಅಕ್ಕೋಳ ಸರಕಾರಿ ಶಾಲೆಯ ಎರಡು ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ
ಚಿಕ್ಕೋಡಿ 24: ನಿಪ್ಪಾಣಿ ತಾಲೂಕಿನ ಸರಕಾರಿ ಮಾದರಿ ಕನ್ನಡ ಶಾಲೆಯ 29 ಲಕ್ಷ ರೂ ವೆಚ್ಚದ ಎರಡು ಶಾಲಾ ಕೊಠಡಿಗಳಿಗೆ ಭೂಮಿ ಪೂಜೆ ನೇರವೇರಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಇಂದ್ರಜೀತ ಸೋಳಾಂಕುರೆ ಮತ್ತು ಉಪಾಧ್ಯಕ್ಷೆ ಶ್ರೀಮತಿ ಶಾರದಾ ಕೋಳಿ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮನೋಜ ಮಲಾಬಾದೆ ಅವರು ಶಾಲಾ ಕೊಠಡಿಗಳ ನಿರ್ಮಾಣದ ಭೂಮಿ ಪೂಜೆ ನೇರವೇರಿಸಿದರು.
ಶಾಲೆಯ ಪ್ರಧಾನ ಗುರುಮಾತೆ ಎಸ್.ಬಿ.ನೇರಲೆ ಮಾತನಾಡಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ವಿಶೇಷ ಅನುದಾನದಲ್ಲಿ 29 ಲಕ್ಷ ರೂ ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳನ್ನು ಮಂಜೂರು ಮಾಡಿದ್ದಾರೆ. ಗ್ರಾಮ ಪಂಚಾಯತಿ ಎಲ್ಲ ಸದಸ್ಯರು ಮತ್ತು ಎಸ್ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಕೂಡಿಕೊಂಡು ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡಿಕೊಳ್ಳುತ್ತೇವೆ. ಇದೇ ರೀತಿ ಪರಿಷತ್ ಸದಸ್ಯರು ಶಾಲೆಗೆ ಹೆಚ್ಚು ಹೆಚ್ಚು ಅನುದಾನ ನೀಡಿ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಯುವರಾಜ ಪಾಟೀಲ, ಹುನ್ನರಗಿಯ ದಾದಾ ಪಾಟೀಲ, ಬಿ.ಬಿ.ಪಾಟೀಲ, ರಾಜು ಪಾಟೀಲ, ನಿಶಿಕಾಂತ ಕುರುಳುಪೆ, ವಿವೇಕಾನಂದ ಸೋಳಾಂಕುರೆ, ದೀಲೀಪ ಮಲಾಬಾದೆ, ಬಾಬಾಸಾಹೇಬ ಕೊಕಾಟೆ, ಧನಾಜಿ ಚೌವ್ಹಾಣ, ಪ್ರಕಾಶ ಮಗದುಮ್ಮ, ಸುಹಾಸ ಪಠಾಡೆ, ಅರುಣ ಮೋಹಿತೆ, ರಾವಸಾಹೇಬ ಜನವಾಡೆ, ಪೋಪಟ ಪಾಟೀಲ, ಸಂತೋಷ ಘವೆ, ಬಾಳು ಘಸ್ತೆ, ಅನೀಲ ಪಾಟೀಲ, ಸುರೇಶ ಮೋಹಿತೆ ಮುಂತಾದವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 