ಬಬಲಾದಿ ಮಠದ ನೂತನ ಕಲ್ಯಾಣ ಮಂಟಪ, ಸಭಾಭವನದ ಭೂಮಿಪೂಜೆ
Bhumi Puja of Babaladi Mutt's new Kalyana Mantapa, Sabhabhavan
ಬಬಲಾದಿ ಮಠದ ನೂತನ ಕಲ್ಯಾಣ ಮಂಟಪ, ಸಭಾಭವನದ ಭೂಮಿಪೂಜೆ
ಜಮಖಂಡಿ 07: ಮಠಗಳ ಸಹಕಾರ ವಿದ್ದಾಗ ಮಾತ್ರ ಮಠಗಳ ಅಭಿವೃದ್ಧಿ ಸಾಧ್ಯ ಎಂದು ಲೊಕೋಪಯೋಗಿ ಇಲಾಖೆಯ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು,
ನಗರದ ಹೊರವಲಯ ಕುಂಚನೂರು ರಸ್ತೆಯಲ್ಲಿ ಬಬಲಾದಿ ಮಠದ ನೂತನ ಕಲ್ಯಾಣ ಮಂಟಪ, ಸಭಾಭವನದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
12ನೇ ಶತಮಾನದಲ್ಲಿ ಬಸವಣ್ಣನವರು ಮಠಗಳಿಂದ ವಿದ್ಯೆ, ದಾಸೋಹವನ್ನು ನಡೆಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ, ಶಿಕ್ಷಣಕ್ಕೆ ಎಲ್ಲರೂ ಹೆಚ್ಚಿನ ಮಹತ್ವ ನೀಡಬೇಕು, ಅನೇಕ ಮಠಗಳು ರಾಜ್ಯದಲ್ಲಿ ತ್ರಿವಿಧ ದಾಸೋಹ ಮಾಡುವ ಮೂಲಕ ಸಮಾಜದಲ್ಲಿ ಸಾಕಷ್ಟು ಬದಲಾವಣೆ ತಂದಿವೆ. ಬಸವಣ್ಣನವರು ಹೇಳಿದಂತೆ ದಯವೇ ಧರ್ಮದ ಮೂಲ ದಯೆಯಿರುವ ಧರ್ಮವನ್ನು ಆಯ್ಕೆ ಮಾಡಿಕೊಳ್ಳಬೇಕು, ಬಬಲಾದಿಯ 14 ಮಠಗಳಲ್ಲಿ ದಾಸೋಹ ಮತ್ತು ಶಿಕ್ಷಣವನ್ನು ನೀಡಲಾಗುತ್ತಿರುವುದು ಶ್ಲಾಘನೀಯ ಎಂದರು.
ಬಬಲಾದಿ ನೂತನ ಮಠಕ್ಕೆ ಸರ್ಕಾರದ ಮುಜರಾಯಿ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ಮಾಡಲಾಗುವುದು, ಎಲ್ಲ ಭಕ್ತರ ಅಪೇಕ್ಷೆಯಂತೆ ಮಠದ ರಸ್ತೆಯ ನಿರ್ಮಾಣ ಹಾಗೂ ಇನ್ನಿತರ ಅಭಿವೃದ್ಧಿ ಮಾಡಲಾಗುವದು ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಜಿ.ಎಸ್.ನ್ಯಾಮಗೌಡ ಪ್ರಾಸ್ತಾವಿಕವಾಗಿ ಮಾಡನಾಡಿ, ಭಕ್ತರು ಹೊಸ ಮಠಕ್ಕೆ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಬಬಲಾದಿ ಮಠದ ವಿರೇಶ ಅಜ್ಜ, ಮಾತನಾಡಿ ಕಾಲಜ್ಞಾನದ ಬಗ್ಗೆ ವಿವರಣೆ ನೀಡದರು. ಚಿಕ್ಕಯ್ಯಮುತ್ಯಾರವರ ಕಾಲಜ್ಞಾನ ಇಂದಿಗೂ ಸುಳ್ಳಾಗಿಲ್ಲ ಎಂದರು.
ಶಿವರುದ್ರಮುತ್ಯಾ, ಮಾತನಾಡಿದರು. ಬಬಲಾದಿ ಮಠ ಜಮಖಂಡಿಯ ದಾಸೋಹ ಚಕ್ರವರ್ತಿ ಸದಾಶಿವ ಮುತ್ಯಾ ಸಾನಿಧ್ಯ ವಹಿಸಿದ್ದರು. ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಮಾಜಿ ಶಾಸಕ ಆನಂದ ನ್ಯಾಮಗೌಡ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ನಗರಸಭೆ ಅಧ್ಯಕ್ಷ ಪರಮಾನಂದ ಗೌರೋಜಿ, ಉಪಾಧ್ಯಕ್ಷೆ ರೇಖಾ ಕಾಂಬಳೆ, ನ್ಯಾಯವಾದಿ ಜಿ.ಕೆ. ಮಠದ ವೇದಿಕೆಯಲ್ಲಿದ್ದರು. ವಿಕ್ರಂ ಇಂಗಳೆ ಸ್ವಾಗತಿಸಿದರು, ಸರಸ್ವತಿ ಸಬರದ ಪ್ರಾರ್ಥನಾಗೀತೆ ಹಾಡಿದರು. ಶಿಕ್ಷಕ ಕಡಕೋಳ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 