ಬೈಕ್ ರಾ್ಯಲಿಗೆ ಚಾಲನೆ
Bike rally kicks off
ಹಾವೇರಿ 30: 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2026 ಅಂಗವಾಗಿ ಶುಕ್ರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹಾವೇರಿ ವತಿಯಿಂದ ಜನ ಜಾಗೃತಿ ಮೂಡಿಸುವ ಕುರಿತು ಬೈಕ್ ರಾ್ಯಲಿ (ದ್ವಿಚಕ್ರ ವಾಹನಗಳ ಜಾಥಾ)ವನ್ನು ಹಾವೇರಿ ಯಲ್ಲಿ ಆಯೋಜಿಸಲಾಗಿತ್ತು. ಪೊಲೀಸ್ ಅಧೀಕ್ಷಕರು, ಹಾವೇರಿ ರವರು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಸದರಿ ಜಾಥಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ ಪ್ರಾರಂಭಗೊಂಡು, ಮಹರ್ಷಿ ಶ್ರೀ ವಾಲ್ಮೀಕಿ ವೃತ್ತ, ಶಹರ ಪೊಲೀಸ್ ಠಾಣೆ, ಸರ್ ಶ್ರೀ ಹೊಸಮನಿ ಸಿದ್ಧಪ್ಪ ವೃತ್ತಗಳ ಮುಖಾಂತರ ಸಾಗಿ ಪ್ರವಾಸಿ ಮಂದಿರದಲ್ಲಿ ಮುಕ್ತಾಯಗೊಂಡಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾನ್ಯ ಪೊಲೀಸ ಅಧೀಕ್ಷಕರು ಹಾವೇರಿ ರವರು ರಸ್ತೆ ಸುರಕ್ಷತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಸದರಿ ಬೈಕ್ ರಾ್ಯಲಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಿಬ್ಬಂದಿ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ, ಮೋಟಾರ್ ವಾಹನ ಚಾಲನಾ ತರಬೇತಿ ಶಾಲೆಗಳ ಸಿಬ್ಬಂದಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ, ವಾಹನಗಳ ಮಾರಾಟ ಕೇಂದ್ರಗಳ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಸಹ ಭಾಗವಹಿಸಿ ಬೈಕ್ ರಾ್ಯಲಿಯನ್ನು ಯಶಸ್ವಿಗೊಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 