ಒಣಗಿದ ಮರ ಬಿದ್ದು ಬೈಕ್ ಸವಾರನಿಗೆ ಗಾಯ
Biker injured after falling dry tree
ಮುಂಡಗೋಡ 24 : ಮುಂಡಗೋಡ-ಬಂಕಾಪುರ ರಸ್ತೆಯಲ್ಲಿ ಮಂಗಳವಾರ ಒಣಗಿದ ಮರ ಅಕಸ್ಮಿಕವಾಗಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಬೈಕ್ ಸವಾರನೊಬ್ಬ ಗಾಯಗೊಂಡಿದ್ದಾನೆ. ಸನವಳ್ಳಿ ಗ್ರಾಮದ ಕಿರಣ ಗುಬ್ಬಕ್ಕನವರ ಅವರು ಮುಂಡಗೋಡದಿಂದ ತಮ್ಮ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಪಾರ್ವತಿ ಪರಮೇಶ್ವರ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ. ಮರ ಬೀಳುವುದಕ್ಕೂ ಬೈಕ್ ಸಾಗುವುದಕ್ಕೂ ಒಂದೇ ಸಮಯದಲ್ಲಿ ನಡೆದ ಕಾರಣ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ಕಿರಣ ಗುಬ್ಬಕ್ಕನವರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೈಕ್ ಕಡಿಮೆ ವೇಗದಲ್ಲಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಈ ಭಾಗದ ಪ್ರಮುಖ ರಸ್ತೆಗಳಲ್ಲಿ ಹಲವೆಡೆ ಒಣಗಿದ ಮರಗಳು ಅಪಾಯಕಾರಿಯಾಗಿ ನಿಂತಿರುವುದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂಬ ಸಾರ್ವಜನಿಕರ ಒತ್ತಾಯ ಕೇಳಿ ಬರುತ್ತಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 