ಒಣಗಿದ ಮರ ಬಿದ್ದು ಬೈಕ್ ಸವಾರನಿಗೆ ಗಾಯ
Biker injured after falling dry tree
ಮುಂಡಗೋಡ 24 : ಮುಂಡಗೋಡ-ಬಂಕಾಪುರ ರಸ್ತೆಯಲ್ಲಿ ಮಂಗಳವಾರ ಒಣಗಿದ ಮರ ಅಕಸ್ಮಿಕವಾಗಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಬೈಕ್ ಸವಾರನೊಬ್ಬ ಗಾಯಗೊಂಡಿದ್ದಾನೆ. ಸನವಳ್ಳಿ ಗ್ರಾಮದ ಕಿರಣ ಗುಬ್ಬಕ್ಕನವರ ಅವರು ಮುಂಡಗೋಡದಿಂದ ತಮ್ಮ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಪಾರ್ವತಿ ಪರಮೇಶ್ವರ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ. ಮರ ಬೀಳುವುದಕ್ಕೂ ಬೈಕ್ ಸಾಗುವುದಕ್ಕೂ ಒಂದೇ ಸಮಯದಲ್ಲಿ ನಡೆದ ಕಾರಣ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ಕಿರಣ ಗುಬ್ಬಕ್ಕನವರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೈಕ್ ಕಡಿಮೆ ವೇಗದಲ್ಲಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಈ ಭಾಗದ ಪ್ರಮುಖ ರಸ್ತೆಗಳಲ್ಲಿ ಹಲವೆಡೆ ಒಣಗಿದ ಮರಗಳು ಅಪಾಯಕಾರಿಯಾಗಿ ನಿಂತಿರುವುದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂಬ ಸಾರ್ವಜನಿಕರ ಒತ್ತಾಯ ಕೇಳಿ ಬರುತ್ತಿದೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 