ಬೀಳಗಿ ತಾಲೂಕಾ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ಸಭೆ
Bilagi Taluka Second PUC Result Improvement Meeting
ಬೀಳಗಿ 31: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬಾಗಲಕೋಟೆ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ಬೀಳಗಿ ತಾಲೂಕಾ ದ್ವಿತೀಯ ಪಿ.ಯು.ಸಿ. ಫಲಿತಾಂಶ ಸುಧಾರಣಾ ಸಭೆ ಜರುಗಿತು.
ಸಭೆಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಮಾತನಾಡಿ ರಾಷ್ಟ್ರ ನಿರ್ಮಾಣದ ಗುರುತರ ಜವಾಬ್ದಾರಿಯನ್ನು ಹೊತ್ತ ಬೋಧಕವೃಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಪಾಠ ಬೋಧನೆಯಲ್ಲಿ ಸೃಜನಾತ್ಮಕತೆಯನ್ನು ರೂಢಿಸಿಕೊಂಡು ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ವಿಷೇಶ ಕಾಳಜಿ ಮತ್ತು ಪರಿಶ್ರಮ ವಹಿಸಬೇಕೆಂದರು.
ನೋಡಲ್ ಪ್ರಾಚಾರ್ಯ ಪುಂಡಲೀಕ ಬಡಿಗೇರ, ಸಂಸ್ಥೆಯ ಆಡಳಿತಾಧಿಕಾರಿ ವ್ಹಿ. ಎಸ್. ಮೇಟಿ, ವಾಣಿಜ್ಯ ವಿಭಾಗದ ಪ್ರಾಚಾರ್ಯ ಜಿ. ಆರ್. ಪಾಟೀಲ, ವಿಜ್ಞಾನ ವಿಭಾಗದ ಪ್ರಾಚಾರ್ಯ ಎಮ್. ಬಿ. ವೆಂಕಟಾಪೂರ, ಹಾಗೂ ತಾಲೂಕಿನ ವಿವಿಧ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 