ಬೀಳಗಿ ತಾಲೂಕಾ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ಸಭೆ
Bilagi Taluka Second PUC Result Improvement Meeting
ಬೀಳಗಿ 31: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬಾಗಲಕೋಟೆ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ಬೀಳಗಿ ತಾಲೂಕಾ ದ್ವಿತೀಯ ಪಿ.ಯು.ಸಿ. ಫಲಿತಾಂಶ ಸುಧಾರಣಾ ಸಭೆ ಜರುಗಿತು.
ಸಭೆಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಮಾತನಾಡಿ ರಾಷ್ಟ್ರ ನಿರ್ಮಾಣದ ಗುರುತರ ಜವಾಬ್ದಾರಿಯನ್ನು ಹೊತ್ತ ಬೋಧಕವೃಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಪಾಠ ಬೋಧನೆಯಲ್ಲಿ ಸೃಜನಾತ್ಮಕತೆಯನ್ನು ರೂಢಿಸಿಕೊಂಡು ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ವಿಷೇಶ ಕಾಳಜಿ ಮತ್ತು ಪರಿಶ್ರಮ ವಹಿಸಬೇಕೆಂದರು.
ನೋಡಲ್ ಪ್ರಾಚಾರ್ಯ ಪುಂಡಲೀಕ ಬಡಿಗೇರ, ಸಂಸ್ಥೆಯ ಆಡಳಿತಾಧಿಕಾರಿ ವ್ಹಿ. ಎಸ್. ಮೇಟಿ, ವಾಣಿಜ್ಯ ವಿಭಾಗದ ಪ್ರಾಚಾರ್ಯ ಜಿ. ಆರ್. ಪಾಟೀಲ, ವಿಜ್ಞಾನ ವಿಭಾಗದ ಪ್ರಾಚಾರ್ಯ ಎಮ್. ಬಿ. ವೆಂಕಟಾಪೂರ, ಹಾಗೂ ತಾಲೂಕಿನ ವಿವಿಧ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 