ಮಾಜಿ ಶಾಸಕರಾದ ಚಂದ್ರಕಾಂತ ಗುರ್ಪ ಅವರ ಜನ್ಮದಿನ
Birthday of former MLA Chandrakant Gurpa
ಮಾಜಿ ಶಾಸಕರಾದ ಚಂದ್ರಕಾಂತ ಗುರ್ಪ ಅವರ ಜನ್ಮದಿನ
ಹುಬ್ಬಳ್ಳಿ 24: ಮಾಜಿ ಶಾಸಕರಾದ ಚಂದ್ರಕಾಂತ ಗುರ್ಪ ಬೆಲ್ಲದ ಅವರ 87ನೇ ಜನ್ಮದಿನೋತ್ಸವ ಶುಭ ಸಂದರ್ಭದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಸರಳ ಸಜ್ಜನ, ಪರಿಶುದ್ಧ ರಾಜಕಾರಣ ಮಾಡಿ, ರಾಜಕೀಯದಿಂದ ದೂರ ಉಳಿದು ಆದ್ಯಾತ್ಮೀಕ, ಸಾಹಿತ್ಯಿಕ, ಧಾರ್ಮಿಕ, ಸಮಾಜ ಸಂಘಟನೆ ತಮ್ಮನ್ನು ತಾವು ತೊಡಗಿಸಿಕೊಂಡು ಜನಪರ ಕಾಳಜಿಯಿಂದ ಅತ್ಯಂತ ಕ್ರೀಯಾಶೀಲ ಕಾರ್ಯಮಾಡುತ್ತಿರುವ, ಹಿರಿಯರು, ಮಾರ್ಗದರ್ಶಕರು, ಪರಮ ಪೂಜ್ಯರಾದ ಚಂದ್ರಕಾಂತ ಗುರ್ಪ ಬೆಲ್ಲದ ಅವರಿಗೆ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು. ಶುಭಕೋರಿದರು. ನಾಡಿನ ಖ್ಯಾತ ಗ್ರಂಥಪಾಲಕರು, ಕವಿಯ ಗ್ರಂಥಾಲಯ ವಿಭಾಗದ ಪ್ರಾಧ್ಯಾಪಕರಾಗಿದ್ದ ಪೊ ಎಂ.ಆರ್.ಕುಂಬಾರ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಪುಷ್ಪ ಸಮರೆ್ಣ ಮಾಡಿ ನಮನಗಳನ್ನು ಸಲ್ಲಿಸಿದ. ನಿವೃತ್ ಪ್ರಾಧ್ಯಾಪಕ ಡಾ.ಎಸ್.ಎಲ್.ಸಂಗಮ, ಪ್ರಾಚಾರ್ಯಡಾ. ಮಹೇಶ ಡಿ. ಹೊರಕೇರಿ, ಸಿದ್ಧಯ್ಯ ಹಿರೇಮಠ, ಚಂದ್ರಶೇಖರ ಚನ್ನಂಗಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ,ಡಾ. ಗುಂಡಣ್ಣ ಕಲಬುರ್ಗಿ, ಮದನ ಕಳಸಕರ, ಡಾ.ವಿನಾಯಕ ಬಂಕಾಪುರ, ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 