ಬಿಷ್ಣೋಯ್ ಗ್ಯಾಂಗ್ನ ಪ್ರಮುಖ ಶೂಟರ್ ಬಂಧನ
Bishnoi gang's main shooter arrested
ನವದೆಹಲಿ: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸಕ್ರಿಯ ಸದಸ್ಯ ಹಾಗೂ ಹರ್ಯಾಣ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಅಮನ್ ಭೈನ್ಸ್ವಾಲ್ನನ್ನು ಅಮೆರಿಕದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ. ಬುಧವಾರ (ಜ. 7) ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಸಿಬಿಐ ಮತ್ತು ಹರ್ಯಾಣ ಪೊಲೀಸರ ತಂಡ ಆತನನ್ನು ವಶಕ್ಕೆ ಪಡೆದಿದೆ.
ಸಿಬಿಐ ಮತ್ತು ಇಂಟರ್ಪೋಲ್ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯು ಭಾರತೀಯ ತನಿಖಾ ಸಂಸ್ಥೆಗಳಿಗೆ ಸಿಕ್ಕ ದೊಡ್ಡ ಯಶಸ್ಸಾಗಿದೆ. ಹರ್ಯಾಣ ಪೊಲೀಸರ ಮನವಿಯ ಮೇರೆಗೆ ಈತನ ವಿರುದ್ಧ ಈ ಹಿಂದೆ 'ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್' ಹೊರಡಿಸಲಾಗಿತ್ತು. ಇದರ ಆಧಾರದ ಮೇಲೆ ಅಮೆರಿಕದ ಭದ್ರತಾ ಸಂಸ್ಥೆಗಳು ಆತನನ್ನು ಪತ್ತೆ ಹಚ್ಚಿ ಭಾರತಕ್ಕೆ ಹಸ್ತಾಂತರಿಸಿವೆ. ಅಮನ್ ಭೈನ್ಸ್ವಾಲ್ ವಿರುದ್ಧ ಕೊಲೆ, ಗಲಭೆ ಸೃಷ್ಟಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ.
ಈ ಹಿಂದೆ ಭಾರತದಲ್ಲಿ ಬಂಧನಕ್ಕೊಳಗಾಗಿದ್ದ ಈತ, ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಆದರೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಸಂಘಟಿತ ಅಪರಾಧ ಗ್ಯಾಂಗ್ನ ಪ್ರಮುಖ ಸದಸ್ಯನಾಗಿದ್ದು, ವಿದೇಶದಲ್ಲಿ ಕುಳಿತು ಗ್ಯಾಂಗ್ನ ಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ ಎನ್ನಲಾಗಿದೆ.
ಆರೋಪಿಯನ್ನು ಯಶಸ್ವಿಯಾಗಿ ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು, ಜ. 7 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಹರ್ಯಾಣ ಪೊಲೀಸರು ಆತನನ್ನು ಬಂಧಿಸಿದ್ದಾರೆ" ಎಂದು ಸಿಬಿಐ ವಕ್ತಾರರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಹರ್ಯಾಣಕ್ಕೆ ಕರೆದೊಯ್ಯಲಾಗಿದ್ದು, ಗ್ಯಾಂಗ್ನ ಇತರ ಸದಸ್ಯರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 