ಹೊಲಗಳಿಗೆ ತೆರಳುವ ರಸ್ತೆಗೆ ತಡೆ: ಗ್ರಾಮಸ್ಥರಿಂದ ಸಂಪರ್ಕ ರಸ್ತೆ ಬಂದ್
Blockage to the road leading to the fields: Villagers block the access road
ಹೊಲಗಳಿಗೆ ತೆರಳುವ ರಸ್ತೆಗೆ ತಡೆ: ಗ್ರಾಮಸ್ಥರಿಂದ ಸಂಪರ್ಕ ರಸ್ತೆ ಬಂದ್
ರಾಣೇಬೆನ್ನೂರು 10: ರೈತರ ಹೊಲಗಳಿಗೆ ತೆರಳುವ ರಸ್ತೆಗೆ ವ್ಯಕ್ತಿಯೊಬ್ಬ ತಡೆಯೊಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ತರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯನ್ನು ಬಂದ್ ಮಾಡಿದ ಘಟನೆ ತಾಲೂಕಿನ ಗುಡ್ಡದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 200- 300 ಎಕರೆ ಜಮೀನಿನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗ್ರಾಮದ ವ್ಯಕ್ತಿಯೊಬ್ಬ ತಮಗೆ ಸೇರಿದ್ದು ಎಂದು ಅದಕ್ಕೆ ಒಡ್ಡು ಕಟ್ಟಿ ಬಂದ್ ಮಾಡಿದ್ದ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಜೋಯಿಸರಹರಳಹಳ್ಳಿ- ಸುಣಕಲ್ಲ ಬಿದರಿ ರಸ್ತೆಯನ್ನು ಬಂದ್ ಮಾಡಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಬಂದು ಸಮಸ್ಯೆ ಇತ್ಯರ್ಥ ಮಾಡಬೇಕು. ಆ ಜಮೀನಿಗಳಿಗೆ ತೆರಳಲು ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ನಮಗೆ ಹೊಸ ರಸ್ತೆಯನ್ನು ಹುಡುಕಿ ಕೊಡುವವರೆಗೂ ರಸ್ತೆ ತೆರವುಗೊಳಿಸುವುದಿಲ್ಲ ಎಂದರು.
ಬಾಕ್ಸ್
ತಾಲೂಕಿನ ಗುಡ್ಡದ ಹೊಸಳ್ಳಿ ಗ್ರಾಮದಲ್ಲಿ ಹೊಲಗಳಿಗೆ ಸಂಪರ್ಕ ಕಲ್ಪಿಸುವ ಜಾಗೆಯು ಖಾಸಗಿ ವ್ಯಕ್ತಿಗೆ ಸೇರಿದ್ದಾಗಿದೆ. ನಕ್ಷೆಯಲ್ಲಿ ಆ ಭಾಗದಲ್ಲಿ ರಸ್ತೆ ಇರುವುದಿಲ್ಲ. ಈ ಕುರಿತು ಈಗಾಗಲೇ ರೆವಿನ್ಯೂ ಅಧಿಕಾರಿ ಹಾಗೂ ಸರ್ವೆ ಅಧಿಕಾರಿಗಳಿಗೆ ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಇತ್ಯರ್ಥಕ್ಕೆ ಸಭೆ ನಡೆಸಲು ತಿಳಿಸಲಾಗಿದೆ. ಒಂದು ವೇಳೆ ಗ್ರಾಮಸ್ಥರು ರಸ್ತೆ ಬೇಕಾದರೆ ಕೋರ್ಟ್ಗ ಹೋಗಿ ರಸ್ತೆ ಮಾಡಿಸಿಕೊಂಡು ಬರಬೇಕು ಎಂದು ತಾಲೂಕ ದಂಡಾಧಿಕಾರಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 