ದೇಹದಾನ : ಸಾವಿನಲ್ಲೂ ಸಾರ್ಥಕತೆ ಮರದ ಹಿರಿಯ ಜೀವಿ!
ಬೆಳಗಾವಿ 26: ಆನೆಗೋಳದ ನಿವಾಸಿ ಅವಿವಾಹಿತ ಜಯಂತ ಸದಾಶಿವ ಕಾಣವಿಂದೆ (80) ನಿಧನರಾಗಿದ್ದಾರೆ (25.12.2024) ಮೃತರ ಅಂತಿಮ ಇಚ್ಛೆಯಂತೆ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ ಬೈಲಹೊಂಗಲ ಮುಖಾಂತರ ಬೆಳಗಾವಿ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಾನವಾಗಿ ನೀಡಿ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ.
ಟ್ರಸ್ಟಿನ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ದೇಹದಾನ ಮಾಡಿದ ಕಾಣವಿಂದೆ ಕುಟುಂಬದವರಿಗೆ ಕೃತಜ್ಞತೆ ತಿಳಿಸಿದ್ದಾರೆ. ಮೃತರಿಗೆ ಇಬ್ಬರು ಸಹೋದರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.