ಹೈಕೋರ್ಟ್ಗೆ ಬಾಂಬ್ ಬೆದರಿಕೆ! ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕೋರ್ಟ್ಗಳಲ್ಲಿ ತಪಾಸಣೆ
Bomb threat to High Court! Inspections conducted in all courts in Uttara Kannada district
ಮುಂಡಗೋಡ 07: ಧಾರವಾಡ ಉಚ್ಚ ನ್ಯಾಯಾಲಯ ಪೀಠ, ಬಾಗಲಕೋಟೆ ಹಾಗೂ ಮೈಸೂರು ಜಿಲ್ಲಾ ನ್ಯಾಯಾಲಯಗಳನ್ನು ಮಂಗಳವಾರ ಮಧ್ಯಾಹ್ನ 1.55ರ ವೇಳೆಗೆ ಖಾಲಿ ಮಾಡಿಸಿ ಬಾಂಬ್ ಸ್ಫೋಟ ಅಥವಾ ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಬೆದರಿಕೆ ಇ-ಮೇಲ್ ಮೂಲಕ ಹೈಕೋರ್ಟ್ನ ಎಆರಿ್ಜ (ಂಖಉ) ಗೆ ಬಂದ ಹಿನ್ನೆಲೆಯಲ್ಲಿ, ಹೈಕೋರ್ಟ್ ಪೀಠ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ಮುಂಡಗೋಡ ಜೆಎಂಎಂಸಿ ನ್ಯಾಯಾಲಯಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳವು ನ್ಯಾಯಾಲಯದ ಪ್ರತಿಯೊಂದು ಭಾಗ, ಮೂಲೆಮೂಲೆ ಹಾಗೂ ಹೊರ ಆವರಣದ ಎಲ್ಲಾ ಪ್ರದೇಶಗಳನ್ನು ಸೂಕ್ಷ್ಮವಾಗಿ ಪರೀಶೀಲಿಸಿತು. ಇದೇ ರೀತಿಯಲ್ಲಿ ಜಿಲ್ಲೆಯ ಇತರೆ ನ್ಯಾಯಾಲಯಗಳಲ್ಲಿಯೂ ಪರೀಶೀಲನೆ ನಡೆಸಲಾಯಿತು.
ಈ ವೇಳೆಗೆ ಎ ಆರ್ ಎಸ್ ಐ ಸಂಜಯ ಭೋವಿ, ಎ ಆರ್ ಎಸ್ ಐ ಜಗನ್ನಾಥ ನಾಯ್ಕ್, ಆನಂದ ನಾಯ್ಕ್, ಸಂತೋಷ್ ನಾಯ್ಕ್, ಮಹೇಶ್ ನಾಯ್ಕ್, ಮಾಬ್ಲು ಗೌಡ, ನಿತ್ಯ ಗೌಡ, ಪ್ರಶಾಂತ್ ಮತ್ತು ಡಾಗ್ ಅಣಶಿ ಪರೀಶೀಲನೆ ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 