ಹೈಕೋರ್ಟ್ಗೆ ಬಾಂಬ್ ಬೆದರಿಕೆ! ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕೋರ್ಟ್ಗಳಲ್ಲಿ ತಪಾಸಣೆ
Bomb threat to High Court! Inspections conducted in all courts in Uttara Kannada district
ಮುಂಡಗೋಡ 07: ಧಾರವಾಡ ಉಚ್ಚ ನ್ಯಾಯಾಲಯ ಪೀಠ, ಬಾಗಲಕೋಟೆ ಹಾಗೂ ಮೈಸೂರು ಜಿಲ್ಲಾ ನ್ಯಾಯಾಲಯಗಳನ್ನು ಮಂಗಳವಾರ ಮಧ್ಯಾಹ್ನ 1.55ರ ವೇಳೆಗೆ ಖಾಲಿ ಮಾಡಿಸಿ ಬಾಂಬ್ ಸ್ಫೋಟ ಅಥವಾ ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಬೆದರಿಕೆ ಇ-ಮೇಲ್ ಮೂಲಕ ಹೈಕೋರ್ಟ್ನ ಎಆರಿ್ಜ (ಂಖಉ) ಗೆ ಬಂದ ಹಿನ್ನೆಲೆಯಲ್ಲಿ, ಹೈಕೋರ್ಟ್ ಪೀಠ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ಮುಂಡಗೋಡ ಜೆಎಂಎಂಸಿ ನ್ಯಾಯಾಲಯಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳವು ನ್ಯಾಯಾಲಯದ ಪ್ರತಿಯೊಂದು ಭಾಗ, ಮೂಲೆಮೂಲೆ ಹಾಗೂ ಹೊರ ಆವರಣದ ಎಲ್ಲಾ ಪ್ರದೇಶಗಳನ್ನು ಸೂಕ್ಷ್ಮವಾಗಿ ಪರೀಶೀಲಿಸಿತು. ಇದೇ ರೀತಿಯಲ್ಲಿ ಜಿಲ್ಲೆಯ ಇತರೆ ನ್ಯಾಯಾಲಯಗಳಲ್ಲಿಯೂ ಪರೀಶೀಲನೆ ನಡೆಸಲಾಯಿತು.
ಈ ವೇಳೆಗೆ ಎ ಆರ್ ಎಸ್ ಐ ಸಂಜಯ ಭೋವಿ, ಎ ಆರ್ ಎಸ್ ಐ ಜಗನ್ನಾಥ ನಾಯ್ಕ್, ಆನಂದ ನಾಯ್ಕ್, ಸಂತೋಷ್ ನಾಯ್ಕ್, ಮಹೇಶ್ ನಾಯ್ಕ್, ಮಾಬ್ಲು ಗೌಡ, ನಿತ್ಯ ಗೌಡ, ಪ್ರಶಾಂತ್ ಮತ್ತು ಡಾಗ್ ಅಣಶಿ ಪರೀಶೀಲನೆ ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 